Advertisement

ಚಾಮರಾಜನಗರ : ವ್ಹೀಲಿಂಗ್ ವಿಚಾರವಾಗಿ ಎರಡು ಕೋಮುಗಳ ನಡುವೆ ಗಲಾಟೆ, ಪೊಲೀಸ್ ಬಿಗಿ ಬಂದೋಬಸ್ತ್

07:40 AM Sep 04, 2022 | Team Udayavani |

ಚಾಮರಾಜನಗರ : ವ್ಹೀಲಿಂಗ್ ವಿಚಾರವಾಗಿ ಎರಡು ಕೋಮುಗಳ ನಡುವೆ ಗಲಾಟೆ ನಡೆದು ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡ ಘಟನೆ ನಗರದ ಸಂತೇಮರಹಳ್ಳಿ ವೃತ್ತದ ಬಳಿ ಶನಿವಾರ ರಾತ್ರಿ ಸಂಭವಿಸಿದೆ.

Advertisement

ಜನನಿಬಿಡ ರಸ್ತೆಯಲ್ಲಿ ಒಂದು ಕೋಮಿನ ಯುವಕರು ವ್ಹೀಲಿಂಗ್ ಮಾಡಿದ್ದು ಇದನ್ನು ಪ್ರಶ್ನಿಸಿದ ಮತ್ತೊಂದು ಕೋಮಿನ ಯುವಕರು ಪ್ರಶ್ನೆ ಮಾಡಿದ್ದಾರೆ ಈ ವೇಳೆ ಎರಡು ಗುಂಪಿನ ನಡುವೆ ಮಾತಿನ ಚಕಮಕಿ ನಡೆದು ನೂಕಾಟ ತಳ್ಳಾಟ ಸಂಭವಿಸಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿತ್ತು, ಈ ವೇಳೆ ಕಲ್ಲು ತೂರಾಟಕ್ಕೆ ಯತ್ನವೂ ನಡೆದಿದೆ, ಪರಿಸ್ಥಿತಿ ಬಿಗಡಾಯಿಸುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ ಅಲ್ಲದೆ ಘಟನಾ ಸ್ಥಳಕ್ಕೆ ಎಸ್ಪಿ ಶಿವಕುಮಾರ್ ಭೇಟಿ ನೀಡಿದ್ದು. ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಸದ್ಯ ಪರಿಸ್ಥಿತಿ ಹತೋಟಿಯಲ್ಲಿದ್ದು ನಗರದೆಲ್ಲೆಡೆ ಪೊಲೀಸರು ಪಥಸಂಚಲನ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಭಾರತ-ಪಾಕ್‌: ಇಂದು “ಸೂಪರ್‌ ಫೋರ್‌’ ಸಂಡೇ; ಬದ್ಧ ಎದುರಾಳಿಗಳು ಮತ್ತೆ ಕಣಕ್ಕೆ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next