Advertisement

ಯುಗಾದಿವರೆಗೆ ಎಚ್ಚರವಹಿಸಿ, ನಿರ್ಲಕ್ಷ್ಯ ಬೇಡ

12:34 PM Mar 13, 2021 | Team Udayavani |

ಚಾಮರಾಜನಗರ: ಕೋವಿಡ್ ಪ್ರಕರಣಗಳು ರಾಜ್ಯದ ಕೆಲವೆಡೆ ಹಾಗೂ ಹೊರ ರಾಜ್ಯದಲ್ಲಿ ಹೆಚ್ಚಾಗು ತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲೂ ಮುಂಜಾಗ್ರತಾ ಕ್ರಮಗಳನ್ನು ಜಿಲ್ಲಾ ಜನರು ಅನುಸರಿಸಬೇಕು. ಜಿಲ್ಲೆಯ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ವಿವಿಧಕಾಯಿಲೆಗಳಿಂದ ಬಳಲುತ್ತಿರುವ 45 ರಿಂದ 59 ವರ್ಷ ಒಳಪಟ್ಟವರು ಉಚಿತವಾಗಿ ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಡಾ. ಎಂ. ಆರ್‌. ರವಿ ಮನವಿ ಮಾಡಿದರು.

Advertisement

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಾಮರಾಜನಗರ ಹಿಂದಿನಿಂದಲೂ ಬಹಳ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಂತಹ ಜಿಲ್ಲೆಯಾಗಿದೆ. ಪ್ರಸ್ತುತ ದಲ್ಲಿಯೂ ಹೀಗೆಯೇ ಕಾರ್ಯನಿರ್ವಹಿಸುವ ದೃಷ್ಟಿಯಿಂದ ಯುಗಾದಿ ಹಬ್ಬದವರೆಗೂ ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು.ಕೋವಿಡ್‌ ಹರಡದಂತೆ ವಹಿಸಬೇಕಿರುವ ಮುಂಜಾಗ್ರತಾ ಕ್ರಮಗಳನ್ನು ತಪ್ಪದೇ ಪಾಲಿಸಬೇಕು ಎಂದರು.

ಇತ್ತೀಚೆಗೆ ಕೋವಿಡ್ ಮುಂಜಾಗ್ರತಾ ಕ್ರಮಗಳ ಅನುಸರಿಸುವಿಕೆಯಲ್ಲಿ ಸಾರ್ವಜನಿಕರು ನಿರ್ಲಕ್ಷ್ಯ ಉದಾಸೀನತೆ ತೋರುತ್ತಿರುವುದನ್ನು ಕಾಣುತ್ತಿದ್ದೇವೆ. ಪರಿಸ್ಥಿತಿ ಕೈಮೀರುವ ಮೊದಲೇ ಅಪಾಯದ ಸೂಚನೆ ಗಳನ್ನು ಅರಿಯಬೇಕಿದೆ. ಎಚ್ಚೆತ್ತುಕೊಳ್ಳದಿದ್ದರೆ ಇನ್ನಷ್ಟು ತೊಂದರೆಗೆ ಒಳಗಾಗಬಹುದು. ಹೀಗಾಗಿ ಜಿಲ್ಲೆಯ ಪ್ರತಿಯೊಬ್ಬರೂ ಕೋವಿಡ್‌ ತಡೆಗೆ ಈ ಹಿಂದೆ ನೀಡಿದ ಬೆಂಬಲ ಸಹಕಾರವನ್ನು ಮುಂದೆಯೂ ನೀಡಬೇಕು. ಈ ಹಿಂದೆಯೂ ತೋರಿದ ಪ್ರಬುದ್ಧತೆ ಪ್ರಸ್ತುತ ದಿನಗಳಲ್ಲಿಯೂ ಇರಲಿ ಎಂದು ಮನವಿ ಮಾಡಿದರು.

ನಿರ್ಬಂಧ ವಿಸ್ತರಣೆ: ತಜ್ಞರ ಸಲಹೆ ಮೇರೆಗೆ ಕೋವಿಡ್ ಸಂಬಂಧಿ ನಿರ್ಬಂಧಗಳು ಮಾರ್ಚ್‌ 31ರ ವರೆಗೂ ಮುಂದುವರಿಯಲಿವೆ ಎಂದು ಸರ್ಕಾರ ಆದೇಶ ಹೊರಡಿಸಿದೆ. ಕೋವಿಡ್‌ ಹರಡದಂತೆ ಮುನ್ನೆಚ್ಚರಿಕೆ ವಹಿಸುವ ಉದ್ದೇಶದಿಂದ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳ ಬೇಕು, ಸ್ಯಾನಿಟೈಜರ್‌ ಬಳಕೆ ಮಾಡಬೇಕು ಎಂದರು.

ನಿರೋಧಕ ಶಕ್ತಿ: ಕೊರೊನಾ ವಿರುದ್ಧ ರೋಗ ನಿರೋಧಕ ಶಕ್ತಿ ಒದಗಿ ಸುವ ಲಸಿಕೆ ನೀಡುವ ಅಭಿಯಾನ ಆರಂಭ ವಾಗಿದೆ. ಮೊದಲೆರೆಡು ಹಂತಗಳಲ್ಲಿ ಆರೋಗ್ಯ ಕಾರ್ಯ ಕರ್ತರು ಹಾಗೂ ಮುಂಚೂಣಿ ಕಾರ್ಯಕರ್ತರಾದ ಕಂದಾಯ, ಪೊಲೀಸ್‌, ನಗರ ಸ್ಥಳೀಯ ಸಂಸ್ಥೆಗಳು, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಅಭಿವೃದ್ದಿ ಇಲಾಖೆಯ ಅಧಿಕಾರಿ ಸಿಬ್ಬಂದಿಗೆ ಲಸಿಕೆ ನೀಡಲಾಗಿದೆ. ಮಾರ್ಚ್‌ 1 ರಿಂದ ಮೂರನೇ ಹಂತದ ಕೋವಿಡ್‌ ಲಸಿಕೆ ಅಭಿಯಾನ ಪ್ರಾರಂಭವಾಗಿದೆ. ಈ ಹಂತದಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ವಿವಿಧ ಅಸ್ವಸ್ಥೆತೆಯಿಂದ ಬಳಲುತ್ತಿರುವ 45 ರಿಂದ 59 ವರ್ಷ ಒಳಪಟ್ಟವರು ಉಚಿತವಾಗಿ ಲಸಿಕೆ ನೀಡಲಾಗುತ್ತಿದೆ ಎಂದರು

Advertisement

ಲಸಿಕೆ: ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ ಮತ್ತು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ವಿರುದ್ಧದ ರೋಗ ನಿರೋಧಕ ಲಸಿಕೆಯನ್ನು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ನೀಡಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳಾದ ಜೆಎಸ್‌ಎಸ್‌ ಹಾಗೂ ಹನೂರು ತಾಲೂಕಿನ ಕಾಮಗೆರೆಯ ಹೋಲಿ ಕ್ರಾಸ್‌ ಆಸ್ಪತ್ರೆಯಲ್ಲಿ 250 ರೂ ನೀಡಿ ಲಸಿಕೆ ಪಡೆದುಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ 45 ರಿಂದ 59 ವರ್ಷ ಒಳಪಟ್ಟವರು ಉಚಿತವಾಗಿ ಲಸಿಕೆ ಪಡೆಯಬೇಕು. ಆಧಾರ್‌ ಇತರೆ ಗುರುತಿನ ಚೀಟಿ ಹಾಜರುಪಡಿಸಿ ಲಸಿಕೆ ಪಡೆಯಬಹುದು. ಆನ್‌ ಲೈನ್‌ ಮೂಲಕವು ನೋಂದಣಿ ಮಾಡಿಸಿ ಲಸಿಕೆ ಪಡೆಯಲು ಅವಕಾಶವಿದೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ.ಸಿ. ರವಿ, ಕೋವಿಡ್‌ ನೋಡೆಲ್‌ ಅಧಿಕಾರಿ ಡಾ. ಮಹೇಶ್‌, ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಕೋವಿಡ್‌ ಲಸಿಕೆ ವಿಶೇಷ ಅಭಿಯಾನ :

ಜಿಲ್ಲೆಯಲ್ಲಿ 1 ಲಕ್ಷ ಜನರು 60 ವರ್ಷ ಮೇಲ್ಪಟ್ಟವರು ಇದ್ದಾರೆ. ಲಸಿಕೆ ಕಾರ್ಯದ ಪ್ರಗತಿಗಾಗಿ ಈ ವಾರದಲ್ಲಿ ಶುಕ್ರವಾರ, ಶನಿವಾರ, ಭಾನುವಾರ ಹಾಗೂ ಸೋಮವಾರದಂದು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.  ಮಂಗಳವಾರ ಮತ್ತು ಗುರುವಾರ ಮಕ್ಕಳಿಗೆ ಸಾಮಾನ್ಯವಾಗಿ ನೀಡುವ ರೋಗ ನಿರೋಧಕ ಲಸಿಕಾ ಕಾರ್ಯಕ್ರಮ ಪೂರ್ವಯೋಜಿತವಾಗಿರುವುದರಿಂದ ಅಂದು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್‌ ಲಸಿಕೆ ನೀಡಲಾಗುವುದಿಲ್ಲ. ಉಳಿದಂತೆ ಎಲ್ಲಾ ದಿನಗಳಂದು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್‌ ಲಸಿಕೆ ನೀಡಲಾಗುತ್ತದೆ. ತಾಲೂಕು ಜಿಲ್ಲಾ ಆಸ್ಪತ್ರೆಗಳಲ್ಲಿ ಭಾನುವಾರ ಹಾಗೂ ರಜಾ ದಿನಗಳನ್ನು ಹೊರತುಪಡಿಸಿ ಎಲ್ಲಾ ದಿನಗಳಲ್ಲೂ ಲಸಿಕೆ ಪಡೆಯಬಹುದೆಂದು ಜಿಲ್ಲಾಧಿಕಾರಿ ತಿಳಿಸಿದರು.

ನಿಗದಿ ಅವಧಿಯೊಳಗೆ ಕೋವಿಡ್‌ ಟೆಸ್ಟ್‌  :

ಹೋಟೆಲ್‌, ರೆಸಾರ್ಟ್‌, ವಸತಿ ಗೃಹಗಳಲ್ಲಿ ಹೊರಭಾಗದಿಂದ ಬಂದು ವಾಸ್ತವ್ಯ ಹೂಡುವವರ ಮೇಲೆ ಆರೋಗ್ಯ ಕುರಿತಗಮನಹರಿಸುವಂತೆ ಮಾಲೀಕರಿಗೆಸೂಚಿಸಲಾಗಿದೆ. ಅಲ್ಲದೇ ಹೋಟೆಲ್‌, ರೆಸಾರ್ಟ್ ನಂತಹ ಸ್ಥಳಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ನಿಗದಿತ ಅವಧಿಯೊಳಗೆ ಕೋವಿಡ್‌ ಪರೀಕ್ಷೆಗೆ ಒಳಪಡಿಸುವಂತೆ ತಿಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ರವಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next