Advertisement

ಚಾಮರಾಜನಗರ: ಸಾಲ ಬಾಧೆ ತಾಳದೆ ರೈತ ಆತ್ಮಹತ್ಯೆ

08:14 PM Jan 09, 2021 | Team Udayavani |

ಚಾಮರಾಜನಗರ: ಸಾಲ ಬಾಧೆ ತಾಳಲಾರದೇ ರೈತರೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಜ್ಯೋತಿಗೌಡನಪುರದಲ್ಲಿ ಶನಿವಾರ ನಡೆದಿದೆ.

Advertisement

ಗ್ರಾಮದ ರೈತ ಪುಟ್ಟಣ್ಣ (40) ಮೃತಪಟ್ಟವರು. ಕಳೆದ ಎರಡು ಮೂರು ವರ್ಷಗಳಿಂದ ವಿವಿಧ ಬೆಳೆಗಳನ್ನು ಬೆಳೆಯುವ ಸಲುವಾಗಿ ಪುಟ್ಟಣ್ಣ 7-8 ಲಕ್ಷ ರೂ. ಖಾಸಗಿ ಸಾಲ ಮಾಡಿಕೊಂಡಿದ್ದರೆನ್ನಲಾಗಿದೆ. ಈ ಸಾಲ ತೀರಿಸಲು ತಮ್ಮ ಜಮೀನನ್ನು ಭೋಗ್ಯಕ್ಕೆ ಹಾಕಿದ್ದು, ಅರ್ಧ ಎಕರೆ ಜಮೀನನ್ನು ಗುತ್ತಿಗೆಗೆ ಪಡೆದು ಭತ್ತ ಬೆಳೆದಿದ್ದರು. ಈ ಬಾರಿ ಭತ್ತಕ್ಕೆ ದರ ಸಿಗಲಿಲ್ಲ.  ಇನ್ನೂ 3 ಲಕ್ಷ ರೂ. ಸಾಲ ಇತ್ತು. ಸಾಲಗಾರರು ಸಾಲ ಮರುಪಾವತಿಸುವಂತೆ ಒತ್ತಡ ಹೇರಿದ್ದರು.  ಭೋಗ್ಯಕ್ಕೆ ಹಾಕಿದ ಜಮೀನು ವಾಪಸ್ ಪಡೆಯಲು ಸಾಧ್ಯವಾಗುವುದಿಲ್ಲ. ಈಗಿನ ಸಾಲವನ್ನೂ ತೀರಿಸಲಾಗುತ್ತಿಲ್ಲ ಎಂದು ಪುಟ್ಟಣ್ಣ ತೀವ್ರ ಹತಾಶೆಗೊಂಡಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಇಂಡೊನೇಷ್ಯಾ : ಟೇಕಾಫ್ ಆದ ಕೆಲಸಮಯದಲ್ಲೇ 62 ಪ್ರಯಾಣಿಕರನ್ನು ಹೊತ್ತ ವಿಮಾನ ನಾಪತ್ತೆ

ಶನಿವಾರ ಮಧ್ಯಾಹ್ನ ಜಮೀನಿಗೆ ತೆರಳಿ, ತಾವು ಭತ್ತ ಬೆಳೆದಿದ್ದ ಜಾಗದಲ್ಲೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುಟ್ಟಣ್ಣ ಅವರಿಗೆ ಪತ್ನಿ, ಓರ್ವ ಪುತ್ರ, ಪುತ್ರಿ ಇದ್ದಾರೆ. ಈ ಸಂಬಂಧ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಲಾವಾದಿಂದ ಜಗತ್ತಿನ ಮೊಟ್ಟ ಮೊದಲ ಕಸ್ಟಮೈಸೇಬಲ್ ಸ್ಮಾರ್ಟ್ ಪೋನ್ ಬಿಡುಗಡೆ

Advertisement

 

Advertisement

Udayavani is now on Telegram. Click here to join our channel and stay updated with the latest news.

Next