Advertisement

ಹಾವು ಕಡಿದು ರೈತ ಮಹಿಳೆ ಸಾವು

05:40 PM Aug 29, 2021 | Team Udayavani |

ಗುಂಡ್ಲುಪೇಟೆ: ಜಮೀನಿನಲ್ಲಿ ಹುಲ್ಲು ಕೀಳುತ್ತಿದ್ದ ವೇಳೆ ನಾಗರಹಾವು ಕಡಿದು ರೈತ ಮಹಿಳೆ ಮೃತಪಟ್ಟ ಘಟನೆ ತಾಲೂಕಿನ ಹೊಂಗಹಳ್ಳಿ ಗ್ರಾಮದಲ್ಲಿ ನಡೆದಿದೆ.

Advertisement

ಗ್ರಾಮದ ಬೆಳ್ಳಮ್ಮ(65) ಮೃತ ಮಹಿಳೆ. ಈಕೆ ಜಮೀನಿನಲ್ಲಿ ಜಾನುವಾರುಗಳಿಗೆ ಹಾಕಲೆಂದು ಹುಲ್ಲು ಕೀಳುತ್ತಿದ್ದ ಸಂದರ್ಭ ಹಾವು ಕಡಿದಿದ್ದು, ರಕ್ಷಣೆಗೆ ಕೂಗಿಕೊಂಡಿದ್ದಾರೆ. ಪಕ್ಕದ ಜಮೀನಿನಲ್ಲಿದ್ದವರು ಬೈಕ್‍ನಲ್ಲಿ ಕೂರಿಸಿಕೊಂಡು ಊರಿಗೆ ಕರೆತಂದರು. ನಂತರ ತುರ್ತು ಚಿಕಿತ್ಸಾ ವಾಹನದಲ್ಲಿ ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ಕರೆದೋಯ್ಯಲಾಯಿತು. ವೈದ್ಯರು ಚಿಕಿತ್ಸೆ ನೀಡಿದರಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.

ಇದನ್ನೂ ಓದಿ:ಹೆಣ್ಣು ಶಿಶುವನ್ನು ಬೀದಿಗೆ ಎಸೆದು ಹೋದ ನೀಚರು: ಕಂದಮ್ಮ ಸಾವು

ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆ ನಂತರ ಪೊಲೀಸರು ಮೃತದೇಹವನ್ನು ವಾರಸುದಾರರಿಗೆ ಒಪ್ಪಿಸಿದರು. ಗ್ರಾಮದಲ್ಲಿ ಅಂತ್ಯಸಂಸ್ಕಾರ ನೆರವೇರಿತು. ಘಟನೆ ಕುರಿತು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next