Advertisement
ಆಶ್ವಯುಜ ಶುಕ್ಲ ಪೂರ್ಣಮಿ, ಉತ್ತರಭಾದ್ರ ನಕ್ಷತ್ರದಲ್ಲಿ ಬೆಳಗ್ಗೆ 6.48 ರಿಂದ 7.18ಗಂಟೆಯಲ್ಲಿ ಸಲ್ಲುವ ಶುಭ ತುಲಾ ಲಗ್ನದಲ್ಲಿ ಮಹಾ ರಥೋತ್ಸವಕ್ಕೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ರಥದ ಹಗ್ಗೆ ಎಳೆಯುವ ಮೂಲಕ ಚಾಲನೆ ನೀಡಿದರು. ಇವರಿಗೆ ಮೇಯರ್ ಪುಷ್ಪಲತಾ ಜಗನ್ನಾಥ್, ಶಾಸಕ ಜಿ.ಟಿ.ದೇವೇಗೌಡ, ಪ್ರಮೋದಾದೇವಿ ಒಡೆಯರ್, ತ್ರಿಷಿಕಾಕುಮಾರಿ ಸೇರಿದಂತೆ ಇತರರು ಸಾಥ್ ನೀಡಿದರು. ಈ ವೇಳೆ ಸಿಡಿಮದ್ದು ಸಿಡಿಸಲಾಯಿತು.
Related Articles
Advertisement
ಸಿಡಿಮದ್ದು: ರಥೋತ್ಸವದಂದು ರಥ ಸಾಗುವ ಮಾರ್ಗದ ಉದ್ದಕ್ಕೂ ಸಿಡಿಮದ್ದು ಸಿಡಿಸುವುದು ವಾಡಿಕೆ. ಅದರಂತೆ ರಥ ಸಾಗುತ್ತಿದ್ದಾಗ ಅಲ್ಲಲ್ಲಿ ಸಿಡಿ ಮದ್ದು ಸಿಡಿಸಲಾಗುತ್ತು. ಸುತ್ತ ಹಾಕಿ ರಥ ದೇವಾಲಯದ ಬಳಿ ಬರುತ್ತಿದ್ದಂತೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಮುತ್ತುರಾಜ್ ಅವರು ತಾವೇ ಸ್ವತಃ ಸಿಡಿಮದ್ದು ಸಿಡಿಸಿದರು.
ವಿಶೇಷ ಬಸ್ ವ್ಯವಸ್ಥೆ: ರಥೋತ್ಸವದ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟಕ್ಕೆ ಮುಂಜಾನೆಯಿಂದಲೇ ಭಕ್ತ ಸಮೂಹ ಹರಿದು ಬಂದಿತ್ತು. ಹೆಚ್ಚಿನ ಭಕ್ತರು ಆಗಮಿಸಿದ್ದರಿಂದ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿತ್ತು. ನಗರ ಸಾರಿಗೆ ಬಸ್ಗಳನ್ನು ಹೊರತು ಪಡಿಸಿ ಉಳಿದ ಎಲ್ಲಾÉ ವಾಹನಗಳನ್ನು ತಾವರೆಕಟ್ಟೆ ಬಳಿಯೇ ತಡೆದ ಪೊಲೀಸರು, ಪ್ರತ್ಯೇಕವಾಗಿ ನಿರ್ಮಿಸಿದ್ದ ವಾಹನ ನಿಲುಗಡೆ, ನೂತನವಾಗಿ ನಿರ್ಮಾಣವಾಗಿರುವ ಬಹುಮಹಡಿ ಪಾರ್ಕಿಂಗ್ ಕಟ್ಟಡಕ್ಕೆ ಕಳುಹಿಸುವ ವ್ಯವಸ್ಥೆ ಮಾಡಿದರು.
ಪ್ರಸಾದಕ್ಕೆ ಮುಗಿಬಿದ್ದ ಭಕ್ತರು: ರಥೋತ್ಸವದ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಅಪಾರ ಸಂಖ್ಯೆಯ ಭಕ್ತರು ಆಗಮಿಸಿದ್ದರಿಂದ ದಾಸೋಹ ಭವನದಲ್ಲಿ ಪ್ರಸಾದ ಸ್ವೀಕರಿಸಲು ಜನರು ಮುಗಿ ಬಿದ್ದರು. ದಾಸೋಹ ಭವನದ ಬಳಿ ಜನಜಂಗುಳಿ ಜೋರಾಗಿತ್ತು. ಭಕ್ತರಿಗೆ ಪೊಂಗಲ್, ಕೇಸರಿ ಬಾತ್ ವಿತರಿಸಲಾಯಿತು.
ಅಲ್ಲದೇ ಹರಕೆಯೊತ್ತ ಭಕ್ತರು ವಾಹನಗಳಲ್ಲಿ ಟೊಮೆಟೋ ಬಾತ್ ಅನ್ನು ಭಕ್ತರಿಗೆ ವಿತರಿಸಿದ್ದು, ಪ್ರಸಾದ ಪಡೆಯಲು ಜನರು ಮುಗಿ ಬಿದ್ದಿದ್ದರು. ರಥೋತ್ಸವ ಮುಗಿದ ಬಳಿಕವೂ ಬೆಟ್ಟಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚಾಗಿಯೇ ಇತ್ತು. ಹೀಗಾಗಿ ದೇವರ ದರ್ಶನ ಪಡೆಯಲು ಉದ್ದನೆಯೇ ಸಾಲು ಕಂಡು ಬಂತು.