Advertisement

Mysuru ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ: ಹೈಕೋರ್ಟ್‌ ತಡೆ

12:13 AM Aug 13, 2024 | Team Udayavani |

ಬೆಂಗಳೂರು: ಮೈಸೂರಿನ ಚಾಮುಂಡೇಶ್ವರಿ ಬೆಟ್ಟ, ದೇವಸ್ಥಾನದ ಅಭಿವೃದ್ಧಿ ಹಾಗೂ ನಿರ್ವಹಣೆಯಲ್ಲಿ ಮೈಸೂರು ರಾಜಮನೆತನದ ಅಧಿಕಾರ ಮೊಟಕುಗೊಳಿಸುವ ಮತ್ತು ರಾಜಮನೆತನದ ಖಾಸಗಿ ಆಸ್ತಿಗಳನ್ನು ಸರಕಾರದ ವ್ಯಾಪ್ತಿಗೆ ತೆಗೆದುಕೊಳ್ಳುವ ಉದ್ದೇಶ ಹೊಂದಿದೆ ಎನ್ನಲಾದ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಯ್ದೆ-2024 ಜಾರಿಗೆ ಹೈಕೋರ್ಟ್‌ ತಾತ್ಕಾಲಿಕ ತಡೆ ನೀಡಿದೆ.

Advertisement

ರಾಜ್ಯ ಸರಕಾರದ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಯ್ದೆ-2024ರ ಹಲವು ಸೆಕ್ಷನ್‌ಗಳನ್ನು ಪ್ರಶ್ನಿಸಿ ಮೈಸೂರು ಒಡೆಯರ್‌ ವಂಶಸ್ಥೆ ರಾಣಿ ಪ್ರಮೋದಾದೇವಿ ಒಡೆಯರ್‌ ಸಲ್ಲಿಸಿರುವ ತಕರಾರು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ಏಕಸದಸ್ಯ ನ್ಯಾಯಪೀಠ, ಮುಂದಿನ ವಿಚಾರಣೆವರೆಗೆ ಕಾಯ್ದೆಯನ್ನು ಜಾರಿಗೆ ತಾರದಂತೆ ತಾತ್ಕಾಲಿಕ ತಡೆ ನೀಡಿ ವಿಚಾರಣೆಯನ್ನು ಆಗಸ್ಟ್‌ 22ಕ್ಕೆ ಮುಂದೂಡಿದೆ.

 ಚಾಮುಂಡಿ ಬೆಟ್ಟ ರಾಜಮನೆತದ ಆಸ್ತಿ: ಪ್ರಮೋದಾದೇವಿ ಒಡೆಯರ್‌

ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಹೈಕೋರ್ಟ್‌ ತಡೆ ನೀಡಿದ ಹಿನ್ನೆಲೆಯಲ್ಲಿ ಪ್ರಾಧಿಕಾರ ತನ್ನ ಅಸ್ತಿತ್ವ ಕಳೆದುಕೊಂಡಿದೆ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ತಿಳಿಸಿದರು. ಅರಮನೆ ಆವರಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರಕಾರವು ಕಾನೂನು ಬಾಹಿರವಾಗಿ ಆಸ್ತಿ ವಶಕ್ಕೆ ಪಡೆದ ವೇಳೆ ಚಾಮುಂಡಿಬೆಟ್ಟದ ದೇಗುಲಗಳು ಸೇರಿ ಇತರೆ ಆಸ್ತಿಗಳು ಮೈಸೂರು ರಾಜಮನೆತನಕ್ಕೆ ಸೇರಿವೆ ಹೈಕೋರ್ಟಿನಲ್ಲಿ ದಾವೆ ಹೂಡಲಾಗಿದೆ. ಅದು ವಿಚಾರಣೆ ಹಂತದಲ್ಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next