Advertisement

ಛಂದ ಪುಸ್ತಕ ಬಹುಮಾನ ಪ್ರಕಟ

10:48 PM Sep 10, 2019 | Lakshmi GovindaRaju |

ಬೆಂಗಳೂರು: ಈ ಸಾಲಿನ ಛಂದ ಪುಸ್ತಕ ಬಹುಮಾನವನ್ನು ಶಶಿ ತರೀಕೆರೆ ಅವರು ತಮ್ಮ ಕಥಾ ಸಂಕಲನದ ಹಸ್ತಪ್ರತಿಗೆ ಪಡೆದುಕೊಂಡಿದ್ದಾರೆ. ಮೂಲತಃ ಚಿಕ್ಕಮಗಳೂರು ಜಿಲ್ಲೆ ತರೀಕೆರೆಯವರಾದ ಶಶಿ, ಸದ್ಯಕ್ಕೆ ಬೆಂಗಳೂರಿನ ಇಸ್ರೋದಲ್ಲಿ ಟೆಕ್ನಿಷಿಯನ್‌ ಆಗಿ ಉದ್ಯೋಗ ಮಾಡುತ್ತಿದ್ದಾರೆ. ತೀರ್ಪುಗಾರರಾಗಿ ಹಿರಿಯ ಕವಯಿತ್ರಿ ಲಲಿತಾ ಸಿದ್ದಬಸವಯ್ಯ ಕಾರ್ಯ ನಿರ್ವಹಿಸಿದ್ದಾರೆ.

Advertisement

ನಾಡಿನ ಯುವ ಕತೆಗಾರರನ್ನು ಗುರುತಿಸುವ ಈ ಸ್ಪರ್ಧೆಗೆ ಸುಮಾರು 100 ಹಸ್ತಪ್ರತಿಗಳು ಬಂದಿದ್ದವು. ಮೊದಲ ಸುತ್ತಿನ ಆಯ್ಕೆಯನ್ನು ಹಿರಿಯ ಕತೆಗಾರ್ತಿ ಸುಮಂಗಲಾ, ಕತೆಗಾರ ಕರ್ಕಿ ಕೃಷ್ಣಮೂರ್ತಿ ಮತ್ತು ವಸುಧೇಂದ್ರ ಮಾಡಿದ್ದಾರೆ. ಛಂದ ಪುಸ್ತಕವು ಈ ಪುಸ್ತಕವನ್ನು ಪ್ರಕಟಿಸಿ, ಕತೆಗಾರರಿಗೆ 30 ಸಾವಿರ ರೂ.ಬಹುಮಾನ, ಪ್ರಶಸ್ತಿ ಪತ್ರ ಮತ್ತು ಪಾರಿತೋಷಕವನ್ನು ನೀಡುತ್ತದೆ. ಅಕ್ಟೋಬರ್‌ 20, 2019ರಂದು ಬೆಂಗಳೂರಿನಲ್ಲಿ ಪುಸ್ತಕ ಬಿಡುಗಡೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next