Advertisement

ಡಿಕೆಶಿ ಸಂಕಟ ನಿವಾರಣೆಗಾಗಿ ಕೊಲ್ಲೂರಲ್ಲಿ ಚಂಡಿಕಾ ಯಾಗ

12:13 AM Sep 10, 2019 | Team Udayavani |

ಕೊಲ್ಲೂರು: ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ, ಕಾಂಗ್ರೆಸ್‌ ಹಿರಿಯ ನಾಯಕ ಡಿ.ಕೆ. ಶಿವಕುಮಾರ್‌ ಅವರು ಎಲ್ಲ ಆರೋಪಗಳಿಂದ ಮುಕ್ತರಾಗುವಂತೆ ಪ್ರಾರ್ಥಿಸಿ ಅವರ ಕುಟುಂಬಿಕರು ಮತ್ತು ಬೆಂಬಲಿಗರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದಲ್ಲಿ ಸೋಮವಾರ ಚಂಡಿಕಾ ಹೋಮ ನೆರವೇರಿಸಿದರು.

Advertisement

ಶಾಸಕಿ ಲಕ್ಷ್ಮೀ ಹೆಬ್ಟಾಳ್ಕರ್‌ ಅವರ ಆಪ್ತ ಸಹಾಯಕ ಮಂಜುನಾಥ ಅವರು ಡಿ.ಕೆ.ಶಿ. ಹೆಸರಿನಲ್ಲಿ ಚಂಡಿಕಾ ಯಾಗದ ರಶೀದಿ ಮಾಡಿಸಿದ್ದರು.

ಸಮೀಪದ ಬಂಧುಗಳಾದ ನಾಗರಾಜ, ಮಂಜು, ಅಶೋಕ, ಮಾಜಿ ಶಾಸಕ ಯು.ಆರ್‌. ಸಭಾಪತಿ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಅಶೋಕ ಕೊಡವೂರು ಕೊಲ್ಲೂರು ದೇಗುಲದ ವ್ಯವಸ್ಥಾಪನ ಸಮಿತಿಯ ಸದಸ್ಯ ರಮೇಶ ಗಾಣಿಗ, ವಂಡ್ಸೆ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಪ್ರದೀಪ ಕುಮಾರ್‌ ಶೆಟ್ಟಿ ಮತ್ತು ಬೈಂದೂರು, ಕುಂದಾಪುರ, ವಂಡ್ಸೆ ಬ್ಲಾಕ್‌ ಕಾಂಗ್ರೆಸ್‌ನ ಮುಖಂಡರು ಚಂಡಿಕಾ ಹೋಮದಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next