Advertisement
ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಇಬ್ಬರೂ ಅಭ್ಯರ್ಥಿಗಳು ಹೊರಗಿನವರೇ ಆಗಿದ್ದು, ಪ್ರತಿ ಬಾರಿ ಹೊರಗಿನ ಅಭ್ಯರ್ಥಿಯನ್ನು ಗೆಲ್ಲಿಸುತ್ತಾ ಬಂದಿರುವ ಜಿಲ್ಲೆಯ ಮತದಾರರು ಈ ಬಾರಿಯೂ ಅದೇ ಪರಿಪಾಠ ಮುಂದುವರೆಸಿದ್ದಾರೆ. ಚುನಾವಣೆ ಘೋಷಣೆಯಾದ ನಂತರ ಮೈತ್ರಿ ಅಭ್ಯರ್ಥಿ ಒಂದು ಸುತ್ತು ಪ್ರಚಾರ ಮುಗಿಸಿದ್ದರೂ ಬಿಜೆಪಿ ಅಭ್ಯರ್ಥಿ ಘೋಷಿಸಿರಲಿಲ್ಲ. ಆದರೆ ಅಳೆದು ತೂಗಿ ಕೊನೇ ಕ್ಷಣದಲ್ಲಿ ನಾರಾಯಣ ಸ್ವಾಮಿ ಅವರನ್ನುಕಣಕ್ಕಿಳಿಸಲಾಗಿತ್ತು. ಇವರಿಗೆ ಟಿಕೆಟ್ ನೀಡಿದ್ದಕ್ಕೆ ವಿರೋಧವೂ ವ್ಯಕ್ತವಾಗಿತ್ತು.
ಭೋವಿ ಸಮುದಾಯಕ್ಕೆ ಟಿಕೆಟ್ ನೀಡದೆ ವಂಚಿಸಲಾಗಿದೆ ಎಂದು ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು ನೇರವಾಗಿಯೇ ಅಸಮಾಧಾನ ಹೊರಹಾಕಿದ್ದರು. ಇವೆಲ್ಲ ಬಿಜೆಪಿಗೆ ಹಿನ್ನಡೆಯಾಗಲಿದೆ ಎಂದೇ ಹೇಳಲಾಗಿತ್ತು. ಆದರೆ ಇವೆಲ್ಲವನ್ನೂ ಮೀರಿ ಬಿಜೆಪಿ ಕ್ಷೇತ್ರದಲ್ಲಿ ಮತ್ತೂಮ್ಮೆ ಪಾರಮ್ಯ ಸಾಧಿಸುವಲ್ಲಿ ಯಶಸ್ವಿಯಾಗಿದೆ.
ಲಾಭವಾಗಿದೆ. ಮೈತ್ರಿ ಪಕ್ಷಗಳ ಲೆಕ್ಕಾಚಾರ, ತಂತ್ರ ಎಲ್ಲವೂ ಸಹ ಮೋದಿ ಅಲೆಯಲ್ಲಿ ಕೊಚ್ಚಿ ಹೋಗಿದ್ದು ಎಐಸಿಸಿ ಅಧ್ಯಕ್ಷ ರಾಹುಲ್ ಪ್ರಚಾರವೂ ಫಲ ಕೊಟ್ಟಿಲ್ಲ. ಕಳೆದ ಬಾರಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದ ಬಿ.ಎನ್.ಚಂದ್ರಪ್ಪ, ಈ ಚುನಾವಣೆಯಲ್ಲಿ ನಾರಾಯಣಸ್ವಾಮಿ ವಿರುದ್ಧ 80,067 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ. ನಾರಾಯಣಸ್ವಾಮಿ 6,26,015 ಮತಗಳನ್ನು ಪಡೆದರೆ, ಮೈತ್ರಿಕೂಟದ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ 5,45,948 ಮತಗಳಿಗೆ ತೃಪ್ತಿಪಡಬೇಕಾಯಿತು. ನನ್ನ ಮೇಲೆ ವಿಶ್ವಾಸವಿಟ್ಟು ಜಿಲ್ಲೆಯ ಜನತೆ ಆಶೀರ್ವಾದ ಮಾಡಿದ್ದಾರೆ. ಮತದಾರರ ನಿರೀಕ್ಷೆ ಹುಸಿಗೊಳಿಸುವುದಿಲ್ಲ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದ್ದು, ಬರಪೀಡಿತ ಪ್ರದೇಶದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ.
– ಎ.ನಾರಾಯಣಸ್ವಾಮಿ, ನೂತನ ಸಂಸದ
Related Articles
– ಬಿ.ಎನ್. ಚಂದ್ರಪ್ಪ ಪರಾಜಿತ ಅಭ್ಯರ್ಥಿ
Advertisement
ಗೆಲುವಿಗೆ 3ಕಾರಣ1. ಮೋದಿ ಅಲೆ, ಸರ್ಜಿಕಲ್ ದಾಳಿ, ದಲಿತ ಅಸ್ಪÅಶ್ಯ ಎಡಗೈ ಅಭ್ಯರ್ಥಿಗೆ ಬಿಜೆಪಿ ಟಿಕೆಟ್ ನೀಡಿದ್ದು.
2. ಕ್ಷೇತ್ರ ವ್ಯಾಪ್ತಿಯಲ್ಲಿ ಐವರು ಬಿಜೆಪಿ ಶಾಸಕರು ಇದ್ದಿದ್ದು.
3. ಕಾರ್ಯಕರ್ತರ ಪ್ರಚಾರ ಬಲ ಯುವ ಮತದಾರರು ಜಾತಿ,ಮತ, ಧರ್ಮ ಭೇದವಿಲ್ಲದೆ ಬಿಜೆಪಿಗೆ ಮತ ಚಲಾಯಿಸಿದ್ದು ಸೋಲಿಗೆ 3 ಕಾರಣ
1. ಮಾದಿಗ ಸಮುದಾಯದವರಿಗೆ ಬಿಜೆಪಿ ಟಿಕೆಟ್ ನೀಡಿದ್ದು.
2. ಮೋದಿ ವಿಜಯ ಸಂಕಲ್ಪ ಯಾತ್ರೆ ಶಿರಾ, ಪಾವಗಡ ಕ್ಷೇತ್ರದಲ್ಲಿ ಕಾಂಗ್ರೆಸ್ಗೆ ಹೆಚ್ಚಿನ ಲಾಭ ಆಗುತ್ತದೆ ಎಂಬ ನಂಬಿಕೆ ಹುಸಿ.
3.ಮಾಜಿ ಶಾಸಕರ ಮೇಲೆ ಹೆಚ್ಚು ಅವಲಂಬಿತವಾಗಿದ್ದರಿಂದ ಇತರೆಡೆ ಗಮನವನ್ನೇ ಹರಿಸಲಿಲ್ಲ