Advertisement

Mangaluru ರಿಯಾದ್‌ನಲ್ಲಿ ಜೈಲುಪಾಲಾದ ಚಂದ್ರಶೇಖರ್‌ ಬಿಡುಗಡೆ ಸಾಧ್ಯತೆ

12:07 AM Aug 19, 2023 | Team Udayavani |

ಮಂಗಳೂರು: ಉದ್ಯೋಗಕ್ಕಾಗಿ ಸೌದಿ ಅರೇಬಿಯಾಕ್ಕೆ ತೆರಳಿ ಹ್ಯಾಕರ್‌ಗಳ ಕುಕೃತ್ಯದಿಂದಾಗಿ ಜೈಲು ಪಾಲಾಗಿರುವ ಕಡಬ ಮೂಲದ ಚಂದ್ರಶೇಖರ್‌ ಅವರ ಬಿಡುಗಡೆ ಸಾಧ್ಯತೆ ಗೋಚರಿಸಿದೆ.

Advertisement

ಸೌದಿಯ ರಿಯಾದ್‌ನಲ್ಲಿ ಸದ್ಯ ಜೈಲಿನಲ್ಲಿರುವ ಕಡಬ ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್‌ ಅವರ ವಿರುದ್ಧ ವಂಚನೆಯ ದೂರು ನೀಡಿದ ಮಹಿಳೆಗೆ ವಂಚನೆಯಾದ ಮೊತ್ತವನ್ನು ಪಾವತಿಸಿ ಎನ್‌ಒಸಿ ಪಡೆದು ಅದನ್ನು ಪೊಲೀಸ್‌ ಹಾಗೂ ಜೈಲಿಗೆ ನೀಡಬೇಕಾಗಿದೆ. ಈ ಕೆಲಸವನ್ನು ರಿಯಾದ್‌ನಲ್ಲಿ ಅವರ ಮಿತ್ರರು ಸೇರಿ ಮಾಡುತ್ತಿದ್ದು, ಎನ್‌ಒಸಿ ಸಿಕ್ಕಿದ ಬಳಿಕ ಬಿಡುಗಡೆಯಾಗುವ ಸಾಧ್ಯತೆಯಿದೆ.

ಮೊಬೈಲ್‌ ಹಾಗೂ ಸಿಮ್‌ ಕಾರ್ಡ್‌ ಪಡೆಯಲು ಕಳೆದ ನವೆಂಬರ್‌ನಲ್ಲಿ ಅಂಗಡಿಗೆ ಹೋದಾಗ ಅವರು ತಮ್ಮ ಹೆಬ್ಬೆಟ್ಟಿನ ಮುದ್ರೆ ನೀಡಿದ್ದರು. ಇದನ್ನೇ ಬಳಸಿಕೊಂಡು ಹ್ಯಾಕರ್‌ಗಳು ಅವರ ಖಾತೆಗೆ ಮಹಿಳೆಯೊಬ್ಬರ ಖಾತೆಯಿಂದ 22 ಸಾವಿರ ರಿಯಲ್‌ ಜಮೆ ಮಾಡಿ, ಅಲ್ಲಿಂದ ಬೇರೆ ದೇಶಕ್ಕೆ ಹಣ ವರ್ಗಾವಣೆ ಮಾಡಿದ್ದರು. ಮಹಿಳೆ ನೀಡಿದ ದೂರಿನಂತೆ ಚಂದ್ರಶೇಖರ್‌ ಬಂಧಿತರಾಗಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next