Advertisement

“ಚಂದ್ರಯಾನ- 2′ಯಶಸ್ವಿ ಉಡಾವಣೆ: ವಿಧಾನಸಭೆ ಅಭಿನಂದನೆ

11:52 PM Jul 22, 2019 | Team Udayavani |

ವಿಧಾನಸಭೆ: ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ “ಚಂದ್ರಯಾನ- 2′ ಸೋಮವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಯಾದ ಹಿನ್ನೆಲೆಯಲ್ಲಿ ಇಸ್ರೋ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಸದನವು, ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿತು. ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರು ಸದನದಲ್ಲಿ ಈ ವಿಷಯ ಪ್ರಸ್ತಾಪಿಸಿ, “ಚಂದ್ರಯಾನ- 2′ ಯಶಸ್ವಿಯಾಗಿ ಉಡಾವಣೆಯಾಗಿದೆ.

Advertisement

ಈ ಬಾಹ್ಯಾಕಾಶ ನೌಕೆಯು ಚಂದ್ರನ ಉದಯ, ಚಂದ್ರನ ಮೇಲೆ ನೀರು ಸೇರಿದಂತೆ ಖನಿಜಗಳೇನಾದರೂ ಇವೆಯೇ ಎಂಬ ಮಾಹಿತಿ ಒದಗಿಸಲಿದೆ. ಈ ಮಹತ್ತರ ಸಾಧನೆಗಾಗಿ ರಾಜ್ಯ ಸರ್ಕಾರ ಹಾಗೂ ಸದನ ಅಭಿನಂದನೆ ಸಲ್ಲಿಸುತ್ತದೆ ಎಂದು ಹೇಳಿದರು. ವಿಧಾನಸಭಾಧ್ಯಕ್ಷ ಕೆ.ಆರ್‌.ರಮೇಶ್‌ ಕುಮಾರ್‌ ಅವರು ಅಭಿನಂದನೆ ಸಲ್ಲಿಸುವ ಮೂಲಕ ಪ್ರಸ್ತಾವವನ್ನು ಅನುಮೋದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next