Advertisement

Mani – Mysore ಹೆದ್ದಾರಿ ಸಂಚಾರದಲ್ಲಿ ಇಂದು ಬದಲಾವಣೆ

11:33 PM Jan 23, 2024 | Team Udayavani |

ಪುತ್ತೂರು: ಕಲ್ಲೇಗ ಶ್ರೀ ಕಲ್ಕುಡ ದೇವಸ್ಥಾನದ ಕಲ್ಕುಡ- ಕಲ್ಲುರ್ಟಿ ದೈವಗಳ ವರ್ಷಾವಧಿ ನೇಮ ಜ. 24ರಂದು ನಡೆಯಲಿದ್ದು ಕಾರ್ಜಾಲು ಗುತ್ತಿನಿಂದ ಭಂಡಾರ ಹೊರಟು ಕಲ್ಲೇಗ ದೇವಸ್ಥಾನ ತಲುಪುವ ಅಂದಾಜು ಸಮಯ ರಾತ್ರಿ 7.45ರಿಂದ 9.15 ಗಂಟೆ ವರೆಗೆ ಮಾಣಿ-ಮೈಸೂರು ರಾ.ಹೆ.ಯಲ್ಲಿ ಸಂಚಾರ ಸುಗಮಕ್ಕೆ ಮಾರ್ಗ ಬದಲಾವಣೆ ಮಾಡಲಾಗಿದೆ.

Advertisement

ಪುತ್ತೂರಿನಿಂದ ಮಂಗಳೂರಿಗೆ ತೆರಳುವ ವಾಹನಗಳು ಮಂಜಲ್ಪಡು³ ಕೊಡಿಪ್ಪಾಡಿ ಕಬಕ ಮೂಲಕ ಮಂಗಳೂರಿಗೆ ತೆರಳುವುದು.

ಮಂಗಳೂರಿನಿಂದ ಪುತ್ತೂರು, ಮೈಸೂರು ಕಡೆಗೆ ತೆರಳುವ ವಾಹನ ಗಳು ಮುರದಿಂದ ರೈಲ್ವೇಬ್ರಿಜ್‌ ಮೂಲಕ ಬನ್ನೂರು ಪಡೀಲ್‌ ಮೂಲಕ ಪುತ್ತೂರಿಗೆ ತೆರಳಬೇಕು.

ಇತರ ವಾಹನಗಳ ಸಂಚಾರಕ್ಕೆ ಸಮಸ್ಯೆ ಆಗದಂತೆ ವಾಹನಗಳನ್ನು ನಿಲುಗಡೆ ಮಾಡಬೇಕು ಎಂದು ಪೊಲೀಸ್‌ ಇಲಾಖೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next