Advertisement

ಚನ್ನಗಿರಿ: ತೋಟದಲ್ಲಿ ಹಾವು ಕಚ್ಚಿ ಕೂಲಿ ಕಾರ್ಮಿಕ ಸಾವು

10:19 PM Sep 10, 2022 | Team Udayavani |

ಚನ್ನಗಿರಿ: ತೋಟದಲ್ಲಿ ಕೂಲಿ ಕೆಲಸವನ್ನು ಮಾಡುತ್ತಿದ್ದ ವ್ಯಕ್ತಿಯೋರ್ವನಿಗೆ ಹಾವು ಕಚ್ಚಿ ಮೃತ ಮಟ್ಟಿರುವ ಘಟನೆ ತಾಲೂಕಿನ ಮುದ್ದೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

Advertisement

ಪಟ್ಟಣದ ನಿವಾಸಿ ಶಂಕರ್(41) ಮೃತ ದುರ್ದೈವಿ. ಮುದ್ದೇನಹಳ್ಳಿ ಗ್ರಾಮದಲ್ಲಿ ತೋಟಕ್ಕೆ ಕಳೆನಾಶಕವನ್ನು ಸಿಂಪಡಿಸುವ ವೇಳೆ ಕಾಲಿಗೆ ಹಾವು ಕಚ್ಚಿದ್ದು ಸ್ಥಳದಲ್ಲಿಯೇ ಕುಸಿದು ಬಿದಿದ್ದು, ಅವರನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದರೂ ಚಿಕಿತ್ಸೆ ಫಲಕರಿಯಾಗದೇ ಸಾವನ್ನಪಿದ್ದಾರೆ.

ಮೃತರ ಕುಟುಂಬಕ್ಕೆ ಆಧಾರ ಸ್ತಂಭವಾಗಿದ್ದು, ಕುಟುಂಬದವರ ಆಕ್ರಂದನ ಮುಗಿಲು ಮುಟ್ಟುವಂತಿತ್ತು. ಚನ್ನಗಿರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next