Advertisement

Channapatna ; ಪೊಲೀಸರ ಮೇಲೆ ಆರೋಪ ಮಾಡಿ ಮಹಿಳೆ ಆತ್ಮಹತ್ಯೆ

07:53 PM Sep 03, 2023 | Team Udayavani |

ಚನ್ನಪಟ್ಟಣ: ಮಹಿಳೆಯೊಬ್ಬಳು ಪೋಲೀಸರ ಮೇಲೆ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

Advertisement

ಚನ್ನಪಟ್ಟಣ ನಗರದ ಕೋಟೆ ನಿವಾಸಿ ಮಾಧುರಿ (31) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ನಿದ್ದೆ ಮಾತ್ರೆ ತಿಂದು ನ್ಯಾಯ ಕೊಡಿಸುವಂತೆ ಕೇಳಿಕೊಂಡು ಪೊಲೀಸರ ವರ್ತನೆ ಬಗ್ಗೆ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ ಗುರುವಾರ ರೈಲ್ವೆ ನಿಲ್ದಾಣ ಬಳಿ ಮಾಧುರಿ ಮತ್ತು ಇನ್ನೊಂದು ಮಹಿಳೆ ಜತೆಗೆ ದುಡ್ಡಿನ ವಿಚಾರಕ್ಕೆ ಗಲಾಟೆ ನಡೆದಿತ್ತು. ಗಲಾಟೆ ಬಳಿಕ ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದರು. ಮಾಧುರಿ ಮೇಲೆ ಹಲವು ಮೋಸ ಮಾಡಿರುವ ಕೇಸ್ ದಾಖಲಾಗಿದ್ದು, ಫ್ರಾಡ್ ಕೇಸ್ ಇದೆ ಎಂಬ ಕಾರಣಕ್ಕೆ ಪೊಲೀಸರು ದೂರು ಸ್ವೀಕರಿಸಲಿಲ್ಲ ಎಂದು ಆರೋಪಿಸಲಾಗಿದೆ.

ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಹೆಚ್ಚಿನ ಚಿಕಿತ್ಸೆಗೆ ಮಂಡ್ಯ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಚನ್ನಪಟ್ಟಣ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next