Advertisement

Channapatna ಗರಿಗೆದರಿದ ʼಕೈʼ ಕಸರತ್ತು; ಡಿಕೆ ಸುರೇಶ್‌ ಪರವಾಗಿ ಎಂ.ಸಿ.ಅಶ್ವಥ್ ಚಂಡಿಕಾಯಾಗ

11:43 AM Oct 17, 2024 | Team Udayavani |

ರಾಮನಗರ: ಉಪ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಚನ್ನಪಟ್ಟಣ (Channapatna by election) ವಿಧಾನಸಭೆ ಕ್ಷೇತ್ರದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ (HD Kumaraswamy) ಅವರಿಂದ ತೆರವಾಗಿರುವ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯು ಎಚ್‌ ಡಿಕೆ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಅವರಿಗೆ ಪ್ರತಿಷ್ಠೆಯ ಕಣವಾಗಿದೆ.

Advertisement

ಲೋಕಸಭೆ ಚುನಾವಣೆಲ್ಲಿ ಸೋಲು ಕಂಡಿರುವ ಡಿ.ಕೆ.ಸುರೇಶ್ ಚನ್ನಪಟ್ಟಣದಲ್ಲಿ ಕಣಕ್ಕೆ ಇಳಿಯಲಿದ್ದಾರೆ ಎಂಬ ಮಾತುಗಳಿವೆ. ಅವರ ಪರವಾಗಿ ಹಲವರು ಬೆಂಬಲಕ್ಕೆ ನಿಂತಿದ್ದಾರೆ. ಇದೀಗ ಮಾಜಿ ಶಾಸಕ ಎಂ.ಸಿ.ಅಶ್ವಥ್ ಅವರು ಕೊಲ್ಲೂರು ಮೂಕಾಂಬಿಕೆ ಸನ್ನಿಧಿಯಲ್ಲಿ ಚಂಡಿಕಾಯಾಗ ನಡೆಸಿದ್ದಾರೆ.

ಡಿ.ಕೆ.ಸುರೇಶ್ ಹೆಸರಿನಲ್ಲಿ ಕುಟುಂಬ ಸಮೇತವಾಗಿ ಅಶ್ವಥ್ ಪೂಜೆ ಸಲ್ಲಿಸಿದ್ದಾರೆ. ಡಿ.ಕೆ.ಸುರೇಶ್ ಗೆ ಗೆಲುವಾಗಲಿ ಎಂದು ಪ್ರಾರ್ಥನೆ ಮಾಡಿದ್ದಾರೆ. ಎಂ.ಸಿ.ಅಶ್ವಥ್ ನಡೆ ಕುತೂಹಲ ಮೂಡಿಸಿದೆ.

ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಟಿಕೆಟ್‌ ಗಾಗಿ ಇತರರೂ ಪ್ರಯತ್ನ ಪಡುತ್ತಿದ್ದಾರೆ. ರಘುನಂದನ್‌ ರಾಮಣ್ಣ ಅವರು ಹೆಸರೂ ಕೇಳಿಬರುತ್ತಿದೆ. ಮತ್ತೊಂದೆಡೆ ಮತ್ತೆ ಕಾಂಗ್ರೆಸ್‌ ಸೇರಿರುವ ತೇಜಸ್ವಿನಿ ಗೌಡ ಅವರು ಕೂಡಾ ಟಿಕೆಟ್‌ ಗಾಗಿ ಪ್ರಯತ್ನ ಮಾಡುತ್ತಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next