Advertisement

Channapatna ByPoll: ಎನ್ ಡಿಎ ಟಿಕೆಟ್ ಯೋಗೇಶ್ವರ್ ಗೆ: ಅಶ್ವಥ್ ನಾರಾಯಣ ಗೌಡ ವಿಶ್ವಾಸ

03:02 PM Oct 19, 2024 | Team Udayavani |

ರಾಮನಗರ: ಚನ್ನಪಟ್ಟಣ ಉಪಚುನಾವಣೆಯಲ್ಲಿ ಟಿಕೆಟ್‌ ಕುರಿತಾಗಿ ಬಿಜೆಪಿ ಮತ್ತು ಜೆಡಿಎಸ್‌ ನಾಯಕರ ಹೇಳಿಕೆಗಳು ತೀವ್ರವಾಗುತ್ತಿದೆ. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಬಿಜೆಪಿ ರಾಜ್ಯ ಪ್ರಧಾನ ವಕ್ತಾರ ಅಶ್ವಥ್ ನಾರಾಯಣ ಗೌಡ ಅವರು, ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್ ಡಿಎ ಟಿಕೆಟ್ ಯೋಗೇಶ್ವರ್ ಗೆ ಸಿಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Advertisement

ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಮತ್ತು ಯೋಗೇಶ್ವರ್ ನಿಂತರೆ ಮಾತ್ರ ಗೆಲ್ಲಲು ಸಾಧ್ಯ. ಯೋಗೇಶ್ವರ್ ನಿಂತರೆ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ. ಯೋಗೇಶ್ವರ್ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಪಕ್ಷದ ಗೆಲುವಿಗೆ ಶ್ರಮಿಸಿದ್ದಾರೆ. ಪಕ್ಷದ ಸಂಘಟನೆಗೆ ಅವರ ಕೊಡುಗೆ ಸಾಕಷ್ಟು ಇದೆ. ಅವರು ಪರಿಣಿತ ರಾಜಕಾರಣಿ ಬೇರೆ ಬೇರೆ ಚಿಹ್ನೆಗಳಲ್ಲಿ ನಿಂತು ಗೆಲುವು ಸಾಧಿಸಿದ್ದಾರೆ. ಸ್ವತಂತ್ರ್ಯವಾಗಿ ನಿಂತರೂ 60 ಸಾವಿರಕ್ಕೂ ಹೆಚ್ಚು ಮತ ಪಡೆಯುತ್ತಾರೆ ಎಂದ ಅಶ್ವಥ್ ನಾರಾಯಣ ಗೌಡ ಹೇಳಿದರು.

ಜೆಡಿಎಸ್ ಕ್ಷೇತ್ರದಲ್ಲಿ ಗೆಲುವು ಸಾಧಿಸಿದೆಯಾದರೂ ಕುಮಾರಸ್ವಾಮಿ ಯೋಗೇಶ್ವರ್ ಅವರಿಗೆ ಬಿಟ್ಟು ಕೊಡುತ್ತಾರೆ ಎಂಬ ವಿಶ್ವಾಸವಿದೆ. ನಾವು ಲೋಕಸಭೆಯಲ್ಲಿ ಕೋಲಾರ ಬಿಟ್ಟು ಕೊಟ್ಡಿದ್ದೇವೆ. ಅವರು ಚನ್ನಪಟ್ಟಣ ಬಿಟ್ಟುಕೊಡುತ್ತಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next