Advertisement

Channapatna: ಸಾಲಕ್ಕೆ ಹೆದರಿ ದಂಪತಿ ನೇಣಿಗೆ ಶರಣು

01:28 PM Oct 11, 2024 | Team Udayavani |

ಚನ್ನಪಟ್ಟಣ: ದನದ ಕೊಟ್ಟಿಗೆಯಲ್ಲಿ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕರಲಹಳ್ಳಿಯಲ್ಲಿ ಘಟನೆ ನಡೆದಿದೆ.

Advertisement

ರಾಜು (34) ಹಾಗೂ ಲಕ್ಷ್ಮೀ (30 ) ನೇಣಿಗೆ ಶರಣಾದ ದಂಪತಿ. ರಾಜು ಹಾಗೂ ಲಕ್ಷ್ಮೀ 5 ವರ್ಷದ ಹಿಂದೆ ಮದುವೆಯಾಗಿದ್ದು, ಇವರಿಗೆ ಮೂರು ವರ್ಷದ ಹೆಣ್ಣು ಮಗುವಿದೆ. ದಂಪತಿ ಸಾಲದ ಸುಳಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಶಂಕೆ ವ್ಯಕ್ತವಾಗಿದೆ.

ಮನೆಯ ದನದ ಕೊಟ್ಟಿಗೆಯಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಅಕ್ಕೂರು ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next