Advertisement

ವ್ಯಕ್ತಿಯೊಬ್ಬನನ್ನು ಕೊಲೆಗೈದು ಕಾರು ಸಮೇತ ಸುಟ್ಟು ಹಾಕಿದ ದುಷ್ಕರ್ಮಿಗಳು

11:20 AM Oct 29, 2020 | sudhir |

ಚನ್ನರಾಯಪಟ್ಟಣ: ವ್ಯಕ್ತಿಯೊಬ್ಬನ ಕೊಲೆ ಮಾಡಿ, ಕಾರು ಸಮೇತ ಆತನನ್ನು ಸುಟ್ಟು ಹಾಕಿರುವ ಘಟನೆ ತಾಲೂಕಿನ
ಎಂ.ಹೊನ್ನೇಹಳ್ಳಿ ಬಳಿ ನಡೆದಿದೆ. ದುಷ್ಕರ್ಮಿಗಳು ವ್ಯಕ್ತಿಯೊಬ್ಬನ ಕೊಲೆ ಮಾಡಿ, ಮೃತದೇಹವನ್ನು ಕಾರಿನ ಡಿಕ್ಕಿಯಲ್ಲಿ ಇಟ್ಟು, ಪೆಟ್ರೋಲ್‌ ಸುರಿದು ಬೆಂಕಿ ಇಟ್ಟಿದ್ದು, ಗುರುತು ಸಿಗದಂತಾಗಿದೆ.

Advertisement

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಎಸ್ಪಿ ಶ್ರೀನಿವಾಸ  ಗೌಡ ಸ್ಥಳಕ್ಕೆ ಆಗಮಿಸಿದ್ದರು. ಕಾರಿನ ಚಾಸ್ಸಿ ನಂಬರ್‌ ಆಧರಿಸಿ ಮಾಲಿಕನ ಪತ್ತೆಗೆ ಸೂಚನೆ ನೀಡಿದರು. ಈ ಬಗ್ಗೆ ಹಿರೀಸಾವೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಬೈಕ್‌ಗಳ ನಡುವೆ ಡಿಕ್ಕಿ: ಓರ್ವ ಸವಾರ ಸಾವು
ಹಾಸನ: ಬೈಕ್‌ಗಳು ಮಧ್ಯೆ ಡಿಕ್ಕಿ ಸಂಭವಿಸಿ ಸವಾರ ಸಾವನ್ನಪ್ಪಿರುವ ಘಟನೆ ಹಾಸನ ತಾಲೂಕು ದುದ್ದ ಹೋಬಳಿ
ಮಾಯಸಮುದ್ರದ ಗ್ರಾಮದ ಬಳಿ ನಡೆದಿದೆ. ತಾಲೂಕಿನ ಹೆಡ್ಡನಹಳ್ಳಿ ಗ್ರಾಮದ ಪ್ರಕಾಶ್‌ ಮಂಗಳವಾರ ಬೈಕ್‌ನಲ್ಲಿ ಜಮೀನಿನಿಂದ ವಾಪಸ್‌ ಮನೆಗೆ ಹೋಗುತ್ತಿದ್ದಾಗ ಮಾಯಸಮುದ್ರ ಗ್ರಾಮದ ಬಳಿ ಎದುರಿನಿಂದ ಬಂದ ಬೈಕ್‌ ಡಿಕ್ಕಿ ಹೊಡೆಯಿತು. ಗಾಯ ಗೊಂಡಿದ್ದ ಪ್ರಕಾಶ್‌ (45), ಹಾಸನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫ‌ಲಿಸದೇ ಮೃತಪಟ್ಟಿದ್ದಾರೆ. ದುದ್ದ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next