Advertisement

ಚಾರ: ಪ್ರತಿಷ್ಠಾ ಮಹೋತ್ಸವ, ಧಾರ್ಮಿಕ ಸಭೆ

11:04 PM May 01, 2019 | Sriram |

ಹೆಬ್ರಿ:ಚಾರ ಗಾಂಧಿನಗರ ಸಪರಿವಾರ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಎ. 30ರಂದು 28ನೇ ವರ್ಷದ ಪ್ರತಿಷ್ಠಾಪನ ಮಹೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಸಾಧಕ ವಿದ್ಯಾರ್ಥಿಗಳು, ಹೆತ್ತವರು ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಸಮ್ಮಾನಿಸಲಾಯಿತು.

Advertisement

ಉದ್ಯಮಿ ಎಚ್‌. ಸುಧೀರ್‌ ನಾಯಕ್‌ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಂಡ್ಯ ನಿತ್ಯಾನಂದ ವಿವೇಕವಂಶಿ, ಹೆಬ್ರಿ ಚಾರ ನವಜೀವನ ಅಭಿವೃದ್ಧಿ ಸಂಸ್ಥೆಯ ಚನ್ನಪ್ಪ ಎಚ್‌., ಉದ್ಯಮಿ ಕೃಷ್ಣ ನಾಯ್ಕ, ವಿಜಯ್‌ ಉಪಸ್ಥಿತರಿದ್ದರು. ಗಾಂಧಿನಗರ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದ ಆಡಳಿತ ಕಾರ್ಯದರ್ಶಿ ರಾಘವೇಂದ್ರ ಡಿ.ಜಿ. ಸ್ವಾಗತಿಸಿ, ಕಾರ್ಯಕಾರಿ ಸಮಿತಿಯ ಜತೆ ಕಾರ್ಯದರ್ಶಿ ಪುಷ್ಪರಾಜ್‌ ಕಾರ್ಯಕ್ರಮ ನಿರೂಪಿಸಿದರು. ರೋಹಿತ್‌ ಕುಮಾರ್‌ ಶೆಟ್ಟಿ ವಂದಿಸಿದರು. ಚಂಡಿಕಾ ಯಾಗ, ಪಂಚವಿಂಶತಿ ಕಲಶಾಭಿಷೇಕ, ಆಶ್ಲೇಷಾ ಬಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನರಸಿಂಹ ಹೇರಳೆ ಅವರ ಧಾರ್ಮಿಕ ನೇತೃತ್ವದಲ್ಲಿ ನಡೆಯಿತು. ಬಳಿಕ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕುಂದಾಪುರ ಮನು ಹಂದಾಡಿ ಅವರಿಂದ ನಗೆಹಬ್ಬ, ಹೆಬ್ರಿ ಚಾಣಕ್ಯ ಮೆಲೋಡಿಸ್‌ ತಂಡದಿಂದ ನೃತ್ಯ ವೈವಿಧ್ಯ, ಸಂಗೀತ ರಸಮಂಜರಿ ಕಾರ್ಯಕ್ರಮ, ಸ್ಥಳೀಯರಿಂದ ಸಾಂಸ್ಕೃತಿಕ ವೈವಿಧ್ಯ ನಡೆಯಿತು.

Advertisement

Udayavani is now on Telegram. Click here to join our channel and stay updated with the latest news.

Next