Advertisement

ಚಾರ್‌ಧಾಮ್‌ ಯಾತ್ರೆಗೆ ಚಾಲನೆ

11:21 AM Apr 27, 2020 | sudhir |

ಡೆಹ್ರಾಡೂನ್‌: ಚಾರ್‌ಧಾಮ್‌ ಯಾತ್ರೆಗೆ ಭಾನುವಾರ ಚಾಲನೆ ಸಿಕ್ಕಿದೆ. ಕೋವಿಡ್ ಹಿನ್ನೆಲೆಯಲ್ಲಿ ಗಂಗೋತ್ರಿ ಹಾಗೂ ಯಮುನೋತ್ರಿ ದೇವಸ್ಥಾನಗಳಲ್ಲಿ ಭಕ್ತರಿಗೆ ಅವಕಾಶ ನೀಡಲಾಗಿಲ್ಲ. ಮಧ್ಯಾಹ್ನ 12.35ಕ್ಕೆ ಸರಿಯಾಗಿ ಆಡಳಿತ ಮಂಡಳಿ ಸದಸ್ಯರು ಮತ್ತು ಇತರರ ಉಪಸ್ಥಿತಿ ಯಲ್ಲಿ ಕಾರ್ಯಕ್ರಮ ನಡೆಯಿತು.

Advertisement

ಯಮುನೋತ್ರಿ ದೇವಸ್ಥಾನವನ್ನು ಮಧ್ಯಾಹ್ನ 12.41ಕ್ಕೆ ತೆರೆಯಲಾಯಿತು. ಸರ್ಕಾರದ ಆದೇಶದಂತೆ ದೇವಸ್ಥಾನದ ಒಳಗೆ ಪ್ರವೇಶಿಸಿದ ಎಲ್ಲರನ್ನು ಥರ್ಮಲ್‌ ಸ್ಕ್ರೀನಿಂಗ್‌ಗೆ ಒಳಪಡಿಸಿದ ನಂತರವೇ ಒಳಬಿಡಲಾಯಿತು. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲಾಗಿತ್ತು’ ಎಂದು ಉತ್ತರಕಾಶಿ ಜಿಲ್ಲಾಧಿಕಾರಿ ಮ್ಯಾಜಿಸ್ಟ್ರೇಟ್‌ ಆಶೀಷ್‌ ಚೌಹಾಣ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next