Advertisement

ದೇಶದ್ರೋಹ ಆರೋಪ: ಜಾಮೀನು ಮಂಜೂರು

07:35 PM Feb 14, 2020 | Sriram |

ಬೀದರ: ಮಕ್ಕಳಿಂದ ನಾಟಕ ಪ್ರದರ್ಶನದಲ್ಲಿ ಪ್ರಧಾನಿಗೆ ಅವಹೇಳನ ಮಾಡಿದ ಆರೋಪದಡಿ ಶಾಹೀನ್‌ ಶಿಕ್ಷಣ ಸಂಸ್ಥೆ ವಿರುದ್ಧ ದೇಶದ್ರೋಹ ಪ್ರಕರಣ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಮುಖ್ಯಗುರು ಫರೀದಾಬೇಗಂ ಮತ್ತು ವಿದ್ಯಾರ್ಥಿನಿ ತಾಯಿ ನಾಜಮುನ್ನೀಸಾ ಬೇಗಂ ಅವರಿಗೆ ಶುಕ್ರವಾರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

Advertisement

ಜಾಮೀನಿನ ಮೇಲಿನ ವಾದ-ಪ್ರತಿವಾದ ಆಲಿಸಿದ ಜಿಲ್ಲಾ ನ್ಯಾಯಾಧೀಶರಾದ ಮನಗೂಳಿ ಪ್ರೇಮಾವತಿ ಅವರು ಶುಕ್ರವಾರ ಆದೇಶ ಪ್ರಕಟಿಸಿದ್ದಾರೆ. ಎರಡು ಜಾಮೀನು ಅರ್ಜಿ, ಒಂದು ಲಕ್ಷ ರೂ. ವೈಯಕ್ತಿಕ ಬಾಂಡ್‌, ಜಿಲ್ಲಾ ನ್ಯಾಯಾಲಯ ವ್ಯಾಪ್ತಿ ಬಿಟ್ಟು ಹೋಗುವಂತಿಲ್ಲ ಹಾಗೂ ಸಾಕ್ಷಿ ನಾಶ ಪಡಿಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಮುಖ್ಯಗುರು, ತಾಯಿಯನ್ನು ಜ.30ರಂದು ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಜಾಮೀನು ಮಂಜೂರಾತಿ ಬಳಿಕ ಕೆಲವು ಪ್ರಕ್ರಿಯೆಗಳು ಬಾಕಿ ಉಳಿದಿದ್ದು, ಶನಿವಾರ ಸಂಜೆ ವೇಳೆಗೆ ಇಬ್ಬರನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ.

Advertisement

Udayavani is now on Telegram. Click here to join our channel and stay updated with the latest news.

Next