Advertisement

ಚಾರ್ಮಾಡಿ ಘಾಟಿನಲ್ಲಿ ಶಾಸಕರ ಬೆಂಬಲಿಗರ ವಾಹನಕ್ಕಿಲ್ಲತಡೆ:ಖಾಕಿ ವಿರುದ್ಧ ಜನಸಾಮಾನ್ಯರ ಆಕ್ರೋಶ

09:02 PM Jul 26, 2021 | Team Udayavani |

ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿನಲ್ಲಿ ಸಂಜೆ 7 ರಿಂದ ಬೆಳಗ್ಗೆ 6 ಗಂಟೆಯವರೆಗೆ ವಾಹನ ಸಂಚಾರ ನಿರ್ಬಂಧ ಹೇರಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಆದರೆ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಬೆಂಬಲಿಗರ ವಾಹನಗಳಿಗೆ ಅನುಮತಿ ನೀಡುವ ಮೂಲಕ ಪೊಲೀಸರು ಆದೇಶ ಉಲ್ಲಂಘಿಸಿರುವ ಆರೋಪ ಕೇಳಿ ಬಂದಿದೆ.

Advertisement

ಚಾರ್ಮಾಡಿಯ ದಟ್ಟ ಕಾನನದಲ್ಲಿ ವರುಣ ಅಬ್ಬರ ನಿಂತಿಲ್ಲ. ಹಾಗಾಗಿ, ಕಳೆದ ಎರಡ್ಮೂರು ವರ್ಷದಿಂದ ಪ್ರತಿ ವರ್ಷ ಚಾರ್ಮಾಡಿಯಲ್ಲಿ ಬೆಟ್ಟ-ಗುಡ್ಡ, ಭೂ ಕುಸಿತ ಸಾಮಾನ್ಯವಾಗಿತ್ತು. ದುರಸ್ಥಿಗೆ ತಿಂಗಳುಗಳೇ ಬೇಕಾಗಿತ್ತು. ಹಾಗಾಗಿ, ಜಿಲ್ಲಾಡಳಿತ ಮುಂಜಾಗೃತ ಕ್ರಮವಾಗಿ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಬಾರದೆಂದು ಚಾರ್ಮಾಡಿಯಲ್ಲಿ ಸಂಜೆ 7 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನೈಟ್ ಜರ್ನಿಗೆ ಸಂಪೂರ್ಣ ಬ್ರೇಕ್ ಹಾಕಲಾಗಿದೆ. ಪರಿಣಾಮ ನಿನ್ನೆ ಹಾಗೂ ಇವತ್ತು ಪ್ರವಾಸಿಗರು ಚಳಿಯಲ್ಲೇ ಅಲ್ಲೆ ಕಾಯುವ ಪರಿಸ್ಥಿತಿ ಎದುರಾಗಿದೆ.

ಆದರೆ, ಶಾಸಕ ಹರೀಶ್ ಪೂಂಜಾ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಫೋನ್ ಮಾಡಿದ ಕೂಡಲೇ ಅವರ ಬೆಂಬಲಿಗರ ವಾಹನಗಳಿಗೆ ಅನುಮತಿ ಕೊಡಲಾಯಿತು. ಇದು ಜನ ಸಾಮಾನ್ಯರ ಕಣ್ಣು ಕೆಂಪಾಗಿಸಿದ್ದು, ಸಾಮಾನ್ಯರಿಗೆ ಒಂದು ನ್ಯಾಯ ರಾಜಕಾರಣಿಗಳಿಗೆ ಒಂದು ನ್ಯಾಯವೇ ಎಂದು ಪ್ರಶ್ನಿಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next