Advertisement

ಚಾರ್ಮಾಡಿ ಘಾಟ್‌: ದುಷ್ಕರ್ಮಿಗಳ ಗುಂಡೇಟಿಗೆ ಕಡವೆ ಬಲಿ

07:04 PM Feb 08, 2023 | Team Udayavani |

ಕೊಟ್ಟಿಗೆಹಾರ : ದುಷ್ಕರ್ಮಿಗಳ ಗುಂಡೇಟಿಗೆ ಕಡವೆಯೊಂದು ಬಲಿಯಾದ ಘಟನೆ ಚಾರ್ಮಾಡಿ ಘಾಟ್‌ನ ಮಲಯಮಾರುತ ಬಳಿ ಬುಧವಾರ ನಡೆದಿದೆ.

Advertisement

ಶಿಕಾರಿ ಮಾಡುವವರ ಗುಂಡಿಗೆ ಕಡವೆ ಬಲಿಯಾಗಿರುವ ಸಾಧ್ಯತೆ ಇದ್ದು ಬುಧವಾರ ಚಾರ್ಮಾಡಿ ಘಾಟ್‌ನ ಮಲಯಮಾರುತದ ಬಳಿ ಹೆದ್ದಾರಿ ಬದಿಯ ಚರಂಡಿಯಲ್ಲಿ ಕಡವೆ ಮೃತದೇಹ ಪತ್ತೆಯಾಗಿದೆ. ಕಡವೆಯ ಕಿವಿ, ತೊಡೆ, ಹೊಟ್ಟೆ ಭಾಗದಲ್ಲಿ ಗುಂಡು ತಗುಲಿದ್ದು ಸ್ಥಳಕ್ಕೆ ಅರಣ್ಯಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೂರು ವರ್ಷದ ಕಡವೆ ಇದಾಗಿದ್ದು ಚಾರ್ಮಾಡಿ ಘಾಟ್ ಹೆದ್ದಾರಿ ಮಾರ್ಗವಾಗಿ ಪ್ರಯಾಣಿಸುವ ವಾಹನ ಚಾಲಕರು ಕಡವೆ ಮೃತದೇಹವನ್ನು ಕಂಡು ಕೊಟ್ಟಿಗೆಹಾರ ಅರಣ್ಯ ಚೆಕ್‌ಪೋಸ್ಟ್ಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ವ್ಯಾಲೆಂಟೈನ್ಸ್‌ ಡೇ ಬದಲು ಹಸುಗಳನ್ನು ಅಪ್ಪಿಕೊಳ್ಳುವ ದಿನವನ್ನಾಗಿ ಆಚರಿಸಿ: ಪತ್ರ ವೈರಲ್‌

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next