Advertisement

ಚಾರ್ಮಾಡಿ ಘಾಟ್ : ಅಪಘಾತಗೊಂಡಿದ್ದ ಕಾರಿನ ಸವಾರನನ್ನು ಬೆದರಿಸಿ ಯುವಕರಿಂದ ದರೋಡೆ

07:49 PM May 05, 2022 | Team Udayavani |

ಕೊಟ್ಟಿಗೆಹಾರ : ಚಾರ್ಮಾಡಿ ಘಾಟ್ ಅಪಘಾತವಾಗಿದ್ದ ವಾಹನದಲ್ಲಿದ್ದ ಸವಾರರನ್ನು ಬೆದರಿಸಿ ಹಣ, ಉಂಗುರ ಹಾಗೂ ಮೊಬೈಲ್‌ನ್ನು ಕಸಿದುಕೊಂಡು ಹೋಗಿರುವ ಘಟನೆ ನಡೆದಿದ್ದು ಈ ಬಗ್ಗೆ ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಈ ಬಗ್ಗೆ ಬೆಂಗಳೂರಿನ ದೇವನಹಳ್ಳಿಯ ಮದುಸೂದನ್ ಎಂಬುವವರು ಬಣಕಲ್ ಠಾಣೆಗೆ ದೂರು ನೀಡಿದ್ದಾರೆ. ಮೇ 3ರಂದು ದೇವನಹಳ್ಳಿಯಿಂದ ಚಾರ್ಮಾಡಿ ಘಾಟ್ ಮಾರ್ಗವಾಗಿ ಕಾರಿನಲ್ಲಿ ಹೊರಟಿದ್ದು ಚಾರ್ಮಾಡಿ ಘಾಟ್‌ನಲ್ಲಿ ರಾತ್ರಿ 12;30 ರ ಸುಮಾರಿಗೆ ರಸ್ತೆ ಬದಿಯ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಣ್ಣ ಗಾಯಗಳಾಗಿದ್ದು ಅಂಬುಲೆನ್ಸ್ ಗೆ ಕರೆ ಮಾಡಲು ನೆಟ್ ವರ್ಕ್ ಇಲ್ಲದೆ ಇರುವುದರಿಂದ ಕಾರಿನಲ್ಲೆ ಕುಳಿತಿದ್ದ ಸಂದರ್ಭದಲ್ಲಿ ಧರ್ಮಸ್ಥಳ ಕಡೆಯಿಂದ ಮೂಡಿಗೆರೆ ಕಡೆಗೆ ಬೈಕ್ ಮತ್ತು ಸ್ಕೂಟರ್ ನಲ್ಲಿ ಬಂದ ಮೂವರು ಯುವಕರ ತಂಡ ಕಾರನ್ನು ಸುತ್ತುವರಿದು 600 ಹಣ, ಮೊಬೈಲ್ ಹಾಗೂ ಉಂಗುರವನ್ನು ಕಸಿದುಕೊಂಡು ಬೆದರಿಕೆ ಹಾಕಿ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ : ಬೆಂಗಳೂರು: ಬಸ್ ಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Advertisement

Udayavani is now on Telegram. Click here to join our channel and stay updated with the latest news.

Next