Advertisement

ಚಾರ್ಮಾಡಿ ಘಾಟಿ ಒಂದು ತಿಂಗಳು ಸಂಚಾರ ನಿಷೇಧ

12:59 PM Aug 15, 2019 | sudhir |

ಬೆಳ್ತಂಗಡಿ : ಕಳೆದ ಕೆಲವು ದಿನಗಳಿಂದ ಸತತ ಸುರಿಯುತ್ತಿರುವ ಮಳೆಗೆ ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿದಿದ್ದು ಸಂಚಾರ ವ್ಯತ್ಯಯವಾದ ಹಿನ್ನೆಲೆಯಲ್ಲಿ ಕಾಮಗಾರಿ ಕಾರ್ಯ ನಡೆಸುವ ಉದ್ದೇಶದಿಂದ ಆಗಸ್ಟ್ 15 ರಿಂದ ಸಪ್ಟೆಂಬರ್ 14ರ ವರೆಗೆ ಚಾರ್ಮಾಡಿ ಘಾಟಿಯಲ್ಲಿ ರಸ್ತೆ ಸಂಚಾರವನ್ನು ಸ್ಥಗಿತಗೊಳಿಸಲು ಆದೇಶ ಹೊರಡಿಸಲಾಗಿದೆ.

Advertisement

ಕಳೆದ ಆಗಸ್ಟ್ 10 ರಿಂದ ಸುರಿದ ಭೀಕರ ಮಳೆಗೆ ಚಾರ್ಮಾಡಿ ಘಾಟಿಯ ಕೆಲವು ತಿರುವುಗಳಲ್ಲಿ ಗುಡ್ಡ ಹಾಗೂ ಮರಗಳು ಕುಸಿದು ರಸ್ತೆ ಸಂಚಾರ ಸಂಪೂರ್ಣ ಹದಗೆಟ್ಟಿದೆ ಇದರ ದುರಸ್ತಿ ಕಾರ್ಯ ಪೂರ್ತಿಗೊಳಿಸಲು ಕನಿಷ್ಠ ಒಂದು ತಿಂಗಳು ಬೇಕಾಗಿದೆ ಎಂದು ಅಧಿಕಾರಿಗಳು ತಿಳಿಸಿದ ಹಿನ್ನೆಲೆಯಲ್ಲಿ ಸಂಚಾರವನ್ನು ಒಂದು ತಿಂಗಳ ಮಟ್ಟಿಗೆ ನಿಷೇದಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next