Advertisement

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

12:18 AM Apr 29, 2024 | Team Udayavani |

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಒಂದನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ತೂಫಾನ್‌ ರಸ್ತೆಗೆ ಪಲ್ಟಿಯಾದ ಘಟನೆ ನಡೆದಿದೆ.

Advertisement

ಕಳಸದಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದಾಗ ತೂಫಾನ್‌ ಪಲ್ಟಿಯಾ ದದ್ದರಿಂದ ವಾಹನದಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಅವರಲ್ಲಿ ಇಬ್ಬರನ್ನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಗರ್ಡಾಡಿಯಲ್ಲಿ ಕಳವು
ಬೆಳ್ತಂಗಡಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗ ನಗದು ಎಗರಿಸಿದ ಘಟನೆ ನಡೆದಿದೆ.
ಗರ್ಡಾಡಿ ಗ್ರಾಮದ ರನ್ನಾಡಿ ನಿವಾಸಿ ಬಿಜು ಕುರಿಯನ್‌ (52) ಎಂಬವರು ರವಿವಾರ ಬೆಳಗ್ಗೆ ಮನೆಗೆ ಬೀಗ ಹಾಕಿ, ಪತ್ನಿ ಮತ್ತು ತಂದೆಯೊಂದಿಗೆ ಧಾರ್ಮಿಕ ಸ್ಥಳಕ್ಕೆ ತೆರಳಿದ್ದರು. ಸ್ವಲ್ಪ ಹೊತ್ತಿನ ಬಳಿಕ ಹಿಂದಿರುಗಿ ಮನೆಗೆ ಬಂದು ನೋಡಿದಾಗ ಮನೆಯ ಬಾಗಿಲು ತೆರೆದಿತ್ತು. 29,000 ರೂ. ಬೆಲೆಬಾಳುವ ಚಿನ್ನಾಭರಣ ಹಾಗೂ 28,000 ರೂ. ನಗದು ಕಳವು ಆಗಿರುವ ಕುರಿತು ಬೆಳ್ತಂಗಡಿ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next