Advertisement

ಚಾರ್ಮಾಡಿ ಧಾರಾಕಾರ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿ

09:59 AM Jun 04, 2020 | sudhir |

ಚಿಕ್ಕಮಗಳೂರು : ನಿಸರ್ಗ ಚಂಡಮಾರುತ ಪರಿಣಾಮವಾಗಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರುಯುತಿದ್ದು ಚಾರ್ಮಾಡಿ ಘಾಟಿಯಲ್ಲಿ ಬಾರಿ ಮಳೆಗೆ ಟೆಂಪೋವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಘಾಟಿಯ ಮೂರನೇ ತಿರುವಿನಲ್ಲಿ ಬುಧವಾರ ಸಂಭವಿಸಿದೆ.

Advertisement

ಘಟನೆಯಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ, ಟೆಂಪೋದಲ್ಲಿದ್ದ ಸಾವಿರಾರು ಮೊಟ್ಟೆಗಳು ನಾಶವಾಗಿದೆ.

ನಿಸರ್ಗ ಚಂಡಮಾರುತ ಪರಿಣಾಮ ರಾಜ್ಯದೆಲ್ಲೆಡೆ ನಿರಂತರ ಮಳೆಯಾಗುತ್ತಿದೆ ಪರಿಣಾಮ ಚಾರ್ಮಾಡಿ ಘಾಟಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಮಳೆಯ ಹೊಡೆತಕ್ಕೆ ಟೆಂಪೋ ಚಾಲಕನಿಗೆ ರಸ್ತೆ ಕಾಣಿಸದೆ ನಿಯಂತ್ರಣ ಕಳೆದುಕೊಂಡು ರಸ್ತೆಯ ಬಲಭಾಗಕ್ಕೆ ಪಲ್ಟಿಯಾಗಿ ಬಿದ್ದಿದೆ. ಪರಿಣಾಮ ಟೆಂಪೋದಲ್ಲಿದ್ದ ಮೊಟ್ಟೆಗಳು ರಸ್ತೆ ತುಂಬಾ ಚೆಲ್ಲಾಪಿಲ್ಲಿಯಾಗಿ ಬಿದ್ದಿತು.

Advertisement

Udayavani is now on Telegram. Click here to join our channel and stay updated with the latest news.

Next