Advertisement

ಚಾರ್ಮಾಡಿ ಘಾಟ್: ಕಾರಿನಲ್ಲಿ ವಿಷ ಸೇವಿಸಿ ವ್ಯಕ್ತಿ ಸಾವು

10:30 AM Aug 26, 2020 | Mithun PG |

ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ಕಾರು ನಿಲ್ಲಿಸಿ ವ್ಯಕ್ತಿಯೊಬ್ಬ ವಿಷ ಸೇವಿಸಿ ಮೃತಪಟ್ಟಿರುವ ಘಟನೆ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮಲೆಯಮಾರುತ ಬಳಿ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬ ವಿಷ ಸೇವಿಸಿದ ಪರಿಣಾಮ ಕಾರಿನಲ್ಲೇ ಸಾವನ್ನಪ್ಪಿದ್ದಾನೆ.
ನಿನ್ನೆ ಸಂಜೆಯಿಂದ ಚಾರ್ಮಾಡಿ ಘಾಟ್ ರಸ್ತೆ ಬದಿ KA-05-MT-4877 ನಂಬರ್ ನ ಕ್ವಿಡ್ ಕಾರು ನಿಂತಿದ್ದು, ಅದೇ ಕಾರಿನಲ್ಲಿ ವಿಷ ಸೇವಿಸಿದ್ದಾನೆ ಎನ್ನಲಾಗಿದೆ.
ಕಾರಿನಲ್ಲಿ ಮೃತ ಪಟ್ಟ ವ್ಯಕ್ತಿಯ ಆಧಾರ್ ಕಾರ್ಡ್ ದೊರಕಿದ್ದು ಅದರಲ್ಲಿ ನಾಗರಾಜು. ಬಿನ್ ರಾಮಣ್ಣ 44 ವರ್ಷ, ವಾಸ ಹೊರಕೆರೆ ದೇವರಪುರ ಗ್ರಾಮ, ಹೊಳಲ್ಕೆರೆ ತಾಲೂಕು, ಚಿತ್ರದುರ್ಗ ಜಿಲ್ಲೆ ಎಂದು ಹೇಳಲಾಗಿದೆ.
ಕಾರಿನ ಪಕ್ಕದ ರಸ್ತೆಯಲ್ಲಿ ವಿಷದ ಬಾಟಲಿ ಪತ್ತೆಯಾಗಿದೆ. ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next