Advertisement

ಜನರ ಅಹವಾಲು ಆಲಿಸಿದ ಚವ್ಹಾಣ

04:16 PM Aug 28, 2022 | Team Udayavani |

ಬೀದರ: ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ ಶನಿವಾರ ತಮ್ಮ ಗೃಹ ಕಚೇರಿ ಬೋಂತಿ ತಾಂಡಾದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದರು.

Advertisement

ಬೆಳಗ್ಗೆಯಿಂದಲೇ ಔರಾದ ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಜನತೆ ತಮ್ಮ ಸಮಸ್ಯೆಗಳನ್ನು ಸಚಿವರೊಂದಿಗೆ ಹಂಚಿಕೊಂಡರು. ಸಚಿವರು ತಕ್ಷಣ ಸಂಬಂಧಿಸಿದ ಅಧಿಕಾರಿಗಳೊಂದಿಗೆ ದೂರವಾಣಿ ಮುಖಾಂತರ ಸಂಪರ್ಕಿಸಿ ಕೆಲವರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಿದರು. ಕೆಲವು ಸಮಸ್ಯೆಗಳ ಇತ್ಯರ್ಥಕ್ಕೆ ಸಮಯದ ಗಡುವು ವಿಧಿಸಿದರು.

ಔರಾದ, ಸಂತಪುರ, ಬಳತ್‌, ಏಕಂಬಾ ಸೇರಿದಂತೆ ಔರಾದ ಹಾಗೂ ಕಮಲನಗರ ತಾಲೂಕಿನ ವಿವಿಧ ಗ್ರಾಮಗಳ ಜನರು ಸಚಿವರನ್ನು ಭೇಟಿಯಾಗಿ ತಮ್ಮ ಗ್ರಾಮಗಳಲ್ಲಿನ ಸಮಸ್ಯೆಗಳ ಬಗ್ಗೆ ಸಚಿವರ ಗಮನಕ್ಕೆ ತಂದು ಸರ್ಕಾರದಿಂದ ಆಗಬೇಕಾದ ಕೆಲಸಗಳ ಬಗ್ಗೆ ಬೇಡಿಕೆ ಸಲ್ಲಿಸಿದರು. ಎಲ್ಲರ ಅಹವಾಲುಗಳನ್ನು ಸಮಚಿತ್ತದಿಂದ ಆಲಿಸಿದ ಸಚಿವರು ಸಕಾರಾತ್ಮಕ ಸ್ಪಂದನೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next