Advertisement

ಚಾಮರಾಜಪೇಟೆ : ಗಣೇಶ ಮೂರ್ತಿ ಪ್ರತಿಷ್ಠಾಪನೆ ವಿಚಾರದಲ್ಲಿ ಕಂದಾಯ ಸಚಿವರು ಹೇಳಿದ್ದೇನು?

11:53 AM Aug 25, 2022 | Team Udayavani |

ಬೆಂಗಳೂರು : ಚಾಮರಾಜಪೇಟೆಯ ಈಗ್ದಾ ಮೈದಾನದಲ್ಲಿ ಗಣೇಶ ಚತುರ್ಥಿಯ ಸಂದರ್ಭದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವ ವಿಚಾರದಲ್ಲಿ ಪತ್ರಕರ್ತರ ಪ್ರಶ್ನೆಗೆ ಸಚಿವ ಆರ್ ಅಶೋಕ್ ಸಭೆ ಸಮಾರಂಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಬಹಳ ಮುಖ್ಯವಾಗಿದೆ ಅಲ್ಲದೆ ನನಗೆ ಆ ರೀತಿಯ ಯಾವುದೇ ಮನವಿಗಳು ಬಂದಿಲ್ಲ ಎಂದು ಹೇಳಿದ್ದಾರೆ.

Advertisement

ವಿಧಾನಸೌಧದಲ್ಲಿ ಗುರುವಾರ ಮಾತನಾಡಿದ ಸಚಿವರು ಚಾಮರಾಜ ಪೇಟೆಯ ಮೈದಾನದಲ್ಲಿ ನಾನು ಮೊದಲ ಬಾರಿಗೆ ಸ್ವಾತಂತ್ರೋತ್ಯ್ಸವ ಆಚರಿಸುವ ನಿರ್ಧಾರ ಮಾಡಿದ್ದೇನೆ ಮುಂದೆ ಕನ್ನಡ ರಾಜ್ಯೋತ್ಸವ ಆಚರಿಸಲು ಆದೇಶ ಹೊರಡಿಸುವವನಿದ್ದೇನೆ ಈವಾಗ ಗಣೇಶೋತ್ಸವದ ಬಗ್ಗೆ ನಾನು ಕೂಡಾ ಗಂಭೀರವಾಗಿ ಆಲೋಚನೆ ಮಾಡುತ್ತಿದ್ದೇನೆ ಸಭೆ ಸಮಾರಂಭದಲ್ಲಿ ಕಾನೂನು ಸುವ್ಯವಸ್ಥೆ ಬಹಳ ಅಗತ್ಯ, ಗಣೇಶ ಕೂರಿಸುವ ಸಂಬಂಧ ಇಂದು ಪೊಲೀಸರು, ಬಿಬಿಎಂಪಿ ಅಧಿಕಾರಿಗಳು ಸಭೆ ನಡೆಯಲಿದೆ ಯಾವ ಸಂದರ್ಭದಲ್ಲಿ ಏನು‌ ಕ್ರಮ ತೆಗೆದುಕೊಳ್ಳಬೇಕು ಎಂಬ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ : ಭಾರೀ ದಂಡ ವಿಧಿಸಿದ್ದಕ್ಕೆ ಪೊಲೀಸ್ ಠಾಣೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಲೈನ್ ಮ್ಯಾನ್!

Advertisement

Udayavani is now on Telegram. Click here to join our channel and stay updated with the latest news.

Next