Advertisement

ಚಿಯರ್‌ 4ಇಂಡಿಯಾ’ಅಭಿಯಾನಕ್ಕೆ ಕೇಂದ್ರ ಕ್ರೀಡಾ ಸಚಿವರಿಂದ ಚಾಲನೆ

12:10 AM Jun 27, 2021 | Team Udayavani |

ಹೊಸದಿಲ್ಲಿ : ಟೋಕಿಯೊ ಒಲಿಂಪಿಕ್ಸ್‌ ನಲ್ಲಿ ಪಾಲ್ಗೊಳ್ಳುವ ಭಾರತದ ಕ್ರೀಡಾಪಟುಗಳನ್ನು ಹುರಿ ದುಂಬಿಸುವ “ಚಿಯರ್‌ 4ಇಂಡಿಯಾ’ ಅಭಿಯಾನಕ್ಕೆ ಕೇಂದ್ರ ಕ್ರೀಡಾ ಸಚಿವ ಕಿರಣ್‌ ರಿಜಿಜು ಶನಿವಾರ ಚಾಲನೆ ನೀಡಿದರು. ದೇಶದಾದ್ಯಂತ ನಡೆಯುವ ಈ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಕರೆಯಿತ್ತರು.

Advertisement

ದೇಶದ 100 ಕ್ರೀಡಾಪಟುಗಳು ಈಗಾಗಲೇ ಒಲಿಂಪಿಕ್ಸ್‌ ಅರ್ಹತೆ ಪಡೆದಿದ್ದಾರೆ. ಅವರನ್ನು ಪ್ರೋತ್ಸಾಹಿಸಲು ದೇಶದ ವಿವಿಧ ಕಡೆಗಳಲ್ಲಿ 6 ಸಾವಿರ ಸೆಲ್ಫಿ ಬೂತ್‌ಗಳನ್ನು ಇರಿಸಲಾಗುವುದು ಎಂದು ರಿಜಿಜು ತಿಳಿಸಿದರು.

“ದೇಶದ ಉದ್ದಗಲದಲ್ಲಿ ಇಂಥ ಪ್ರೇರಣಾತ್ಮಕ ಕಾರ್ಯಗಳು ನಡೆಯಬೇಕು. ಆ ಮೂಲಕ ದೇಶದ ಪ್ರಮುಖ ಶಕ್ತಿಗಳಲ್ಲಿ ಒಂದಾದ ಕ್ರೀಡೆಯನ್ನು ಬೆಳೆಸಲು ನೆರವಾಗಬೇಕು’ ಎಂದು ಕಿರಣ್‌ ರಿಜಿಜು ವಿನಂತಿಸಿದರು.

ಈ ಅಭಿಯಾನಕ್ಕೆ ಕೇಂದ್ರ ರೈಲ್ವೇ ಸಚಿವ ಪೀಯೂಷ್‌ ಗೋಯೆಲ್‌ ಕೂಡಲೇ ಕೈ ಜೋಡಿಸಿದರು. ದೇಶದ ಎಲ್ಲ ರೈಲ್ವೇ ನಿಲ್ದಾಣಗಳಲ್ಲಿ ಸೆಲ್ಫಿ ಬೂತ್‌ಗಳನ್ನು ಸ್ಥಾಪಿಸಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವುದಾಗಿ ಅವರು ಟ್ವೀಟ್‌ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next