Advertisement

ಮಹಾನ್‌ ವಂಚಕ ಯುವರಾಜನ ಮತ್ತೂಂದು ದೋಖಾ ಬಯಲು

08:23 AM Jan 30, 2021 | Team Udayavani |

ಬೆಂಗಳೂರು: ಆರ್‌ಎಸ್‌ಎಸ್‌ ಕಾರ್ಯಕರ್ತ ಹೇಳಿಕೊಂಡು ಪ್ರತಿಷ್ಠಿತ ಹುದ್ದೆಗಳನ್ನು ಕೊಡಿಸುವುದಾಗಿ ನಂಬಿಸಿ ಹಲವರಿಗೆ ವಂಚಿರುವ ಯುವರಾಜ್‌ ಅಲಿಯಾಸ್‌ ಸ್ವಾಮಿಯ ಮತ್ತೂಂದು ವಂಚನೆ ಪ್ರಕರಣ ಬಯಲಾಗಿದೆ.

Advertisement

ಕೇಂದ್ರ ರೇಷ್ಮೆ ಮಂಡಳಿ ಅಧ್ಯಕ್ಷಗಿರಿ ಕೊಡಿಸುವುದಾಗಿ ನಂಬಿಸಿ ಆಂಧ್ರದ ಕಾಳಹಸ್ತಿಯ ಬಿಜೆಪಿ ಮುಖಂಡ ಕೋಲಾ ಆನಂದ್‌ ಎಂಬುವವರ ಬಳಿ ಒಂದೂವರೆ ಕೋಟಿ ರೂ. ಪಡೆದಿರುವುದು ಬಯಲಾಗಿದೆ.

ಈ ಪ್ರಕರಣದ ತನಿಖೆಯನ್ನು ನಡೆಸುತ್ತಿರುವ ಸಿಸಿಬಿ ಪೊಲೀಸರು ಆರೋಪಿ ಯುವರಾಜನನ್ನು ಫೆ.1ರವರೆಗೆ ಕಸ್ಟಡಿಗೆ ಪಡೆದುಕೊಂಡು ವಿಚಾರಣೆ ಮುಂದುವರಿಸಿದ್ದಾರೆ.

ಇದನ್ನೂ ಓದಿ:ಪಕ್ಷಕ್ಕೆ ಹಮಾಲಿ ಮಾಡಿದ್ದು ನಾವು, ಬೇರೆಯವರು ಅಧಿಕಾರ ಅನುಭವಿಸುತ್ತಿದ್ದಾರೆ: ರೇಣುಕಾಚಾರ್ಯ

ಶ್ರೀಕಾಳಹಸ್ತಿ ದೇವಾಲಯಕ್ಕೆ ತೆರಳಿದ್ದ ಯುವರಾಜ ಅಲ್ಲಿ ಕೋಲಾಆನಂದ್‌ ಎಂಬುವವರನ್ನು ಪರಿಚಯ ಮಾಡಿಕೊಂಡಿದ್ದ. ಬಳಿಕ, ತಾನು ಆರ್‌ಎಸ್‌ಎಸ್‌ ಕಾರ್ಯಕರ್ತ ಎಂದು ನಂಬಿಸಿದ್ದ. ಜತೆಗೆ, ಕೇಂದ್ರ ಹಾಗೂ ರಾಜ್ಯದ ಬಿಜೆಪಿ ನಾಯಕರ ಜತೆಗಿನ ಪೊಟೋಗಳನ್ನು ತೋರಿಸಿ ನಾನು ಅತ್ಯಂತ ಪ್ರಭಾವಿ ಎಂದು ಹೇಳಿಕೊಂಡಿದ್ದ. ಅಷ್ಟೇ ಅಲ್ಲದೆ ನೀವು ಹಣ ನೀಡಿ ಬೆಂಗಳೂರಿಗೆ ಬಂದರೆ ಕೇಂದ್ರ ರೇಷ್ಮೆ ಮಂಡಳಿ ಅಧ್ಯಕ್ಷ ಹುದ್ದೆ ಕೊಡಿಸುತ್ತೇನೆ ಎಂದು ಹೇಳಿದ್ದ.

Advertisement

ಯುವರಾಜನ ಮಾತು ನಂಬಿ ಆನಂದ ಕಾಳ ಬೆಂಗಳೂರಿಗೆ ಆಗಮಿಸಿ ಐಶಾರಾಮಿ ಹೋಟೆಲ್‌ನಲ್ಲಿ ತಂಗಿದ್ದರು. ಅಲ್ಲಿ ಭೇಟಿ ಮಾಡಿದ್ದ ಯುವರಾಜ ಅವರಿಂದ 1.5 ಕೋಟಿ ರೂ. ಪಡೆದುಕೊಂಡಿದ್ದ. ಬಳಿಕ ಹುದ್ದೆಯೂ ಕೊಡಿಸದೇ ಹಣವೂ ವಾಪಾಸ್‌ ನೀಡಿರಲಿಲ್ಲ. ಕೋಲಾ ಆನಂದ್‌ ಹಣ ವಾಪಾಸ್‌ ಕೇಳಿದ್ದಕ್ಕೆ ಕೊಲೆ ಬೆದರಿಕೆ ಹಾಕಿ, ಐಟಿ, ಇಡಿಗೆ ದೂರು ನೀಡುತ್ತೇನೆ ಎಂದು ಬೆದರಿಸಿದ್ದ.

ಇದನ್ನೂ ಓದಿ: ಸುದ್ದಿಯಲ್ಲಿದ್ದಾರೆ ನ್ಯಾ| ಗಣೇದಿವಾಲಾ

ಸಿಸಿಬಿ ಪೊಲೀಸರು ಯುವರಾಜನನ್ನು ವಂಚನೆ ಪ್ರಕರಣದಲ್ಲಿ ಬಂಧಿಸಿರುವ ಮಾಹಿತಿ ತಿಳಿದುಕೊಂಡಿದ್ದ ಕೋಲಾ ಆನಂದ್‌ ಹೈಗ್ರೌಂಡ್ಸ್‌ ಠಾಣೆಯಲ್ಲಿ ದೂರು ನೀಡಿದ್ದರು. ಈ ಪ್ರಕರಣದ ತನಿಖೆಯನ್ನು ಸಿಸಿಬಿ ನಡೆಸುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next