Advertisement

ಉ.ಪ್ರ ಬೋರ್ಡ್‌ ಪರೀಕ್ಷೆ : ಚೀಟಿಂಗ್‌ ಮಾಫಿಯಾ ವಿರುದ್ಧ NSA ಕೇಸು

09:49 AM Jan 08, 2019 | udayavani editorial |

ಲಕ್ನೋ : ಬೋರ್ಡ್‌ ಪರೀಕ್ಷೆಗಳಲ್ಲಿ ವಂಚನೆ ಮಾಡುವವರು ಮತ್ತು ಅವರಿಗೆ ಕುಮ್ಮಕ್ಕು ನೀಡುವವರನ್ನು ಅತ್ಯಂತ ಕಠಿನವಾದ ರಾಷ್ಟ್ರೀಯ ಭದ್ರತಾ ಕಾಯಿದೆಯಡಿ (ಎನ್‌ಎಸ್‌ಎ) ಶಿಕ್ಷಿಸಲಾಗುವುದು ಎಂದು ಉತ್ತರ ಪ್ರದೇಶ ಸರಕಾರ ಇಂದು ಹೇಳಿದೆ. 

Advertisement

ಪರೀಕ್ಷೆ ಎದುರಿಸುವ ಸಹಸ್ರಾರು ಮಕ್ಕಳ ಭವಿಷ್ಯವನ್ನು ಉಳಿಸಲು ಬೋರ್ಡ್‌ ಪರೀಕ್ಷೆಗಳಲ್ಲಿ ವಂಚನೆ ನಡೆಸುವ ಮತ್ತು ಅವರಿಗೆ ಕುಮ್ಮಕ್ಕು ನೀಡುವವರ ವಿರುದ್ಧ ಎನ್‌ಎಸ್‌ಎ ಅಡಿ ಕಠಿನ ಕ್ರಮ ಕೈಗೊಳ್ಳಬೇಕಾದ ಅನಿವಾರ್ಯತೆ ಈಗ ಒದಗಿದೆ; ಸರಕಾರ ಆ ಪ್ರಕಾರ ನಡೆದುಕೊಳ್ಳಲಿದೆ ಎಂದು ಉಪ ಮುಖ್ಯಮಂತ್ರಿ ದಿನೇಶ್‌ ಶರ್ಮಾ ಎಚ್ಚರಿಕೆ ನೀಡಿದರು.

ಪರೀಕ್ಷೆಗಳಲ್ಲಿ ಉತ್ತರ ಪತ್ರಿಕೆಯನ್ನು ಬದಲಾಯಿಸುವುದು, ಸಮೂಹ ನಕಲು ಮಾಡುವುದರ ವಿರುದ್ಧ ಇನ್ನು ಮುಂದೆ ಮುಲಾಜಿಲ್ಲದೆ ಕಠಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದವರು ಹೇಳಿದರು. ಉತ್ತರ ಪ್ರದೇಶದಲ್ಲಿ ಬೋರ್ಡ್‌ ಪರೀಕ್ಷೆಗಳು ಫೆ.7ರಂದು ಪ್ರಾರಂಭವಾಗಲಿದ್ದು 16 ಕೆಲಸದ ದಿನಗಳಲ್ಲಿ ಅದು ನಡೆಯಲಿದೆ. 

Advertisement

Udayavani is now on Telegram. Click here to join our channel and stay updated with the latest news.

Next