Advertisement

ಕಬ್ಬು ಬೆಳೆಗಾರರಿಗೆ ತೂಕದಲ್ಲಿ ಮೋಸ : ಸರ್ಕಾರದ ಕ್ರಮಕ್ಕೆ ಬೆಂಬಲ: ಮಾಜಿ ಸಚಿವ ನಿರಾಣಿ

08:05 PM Jul 22, 2023 | Team Udayavani |

ಬಾಗಲಕೋಟೆ : ರಾಜ್ಯದಲ್ಲಿ ಕಬ್ಬು ಬೆಳೆಗಾರ ರೈತರಿಗೆ ಸಕ್ಕರೆ ಕಾರ್ಖಾನೆಗಳಿಂದ ತೂಕದಲ್ಲಿ ಮೋಸವಾಗುತ್ತಿದೆ ಎಂಬ ವಿಷಯ ವಿಧಾನಸಭೆಯಲ್ಲಿ ಚರ್ಚೆಯಾಗಿದೆ. ಸರ್ಕಾರ, ಈ ವಿಷಯದಲ್ಲಿ ರೈತರಿಗೆ ಮೋಸವಾಗದಿರಲು ನಮ್ಮ ಎಂಎನ್‌ಆರ್ ಸಂಸ್ಥೆ 15 ವರ್ಷಗಳಿಂದ ಎಲೆಕ್ಟ್ರಿಕಲ್ ವೇಬ್ರಿಜ್ ಯಂತ್ರ ಅಳವಡಿಸಿದೆ. ಈ ವಿಷಯದಲ್ಲಿ ಸರ್ಕಾರ ಯಾವುದೇ ಕ್ರಮ ಕೈಗೊಂಡರೂ ಇದಕ್ಕೆ ಸಂಪೂರ್ಣ ಸಹಕಾರ ನೀಡುವ ಜತೆಗೆ ಅಗತ್ಯಬಿದ್ದರೆ ಸಲಹೆ ಕೂಡ ನೀಡುವುದಾಗಿ ಮಾಜಿ ಸಚಿವ, ಸಕ್ಕರೆ ಉದ್ಯಮಿ ಮುರುಗೇಶ ನಿರಾಣಿ ಹೇಳಿದ್ದಾರೆ.

Advertisement

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರಿಗೆ ಕಬ್ಬು ತೂಕದಲ್ಲಿ ಮೋಸ ಆಗುತ್ತಿದೆ ಎಂದು ಗಾಳಿಯಲ್ಲಿ ಗುಂಡು ಹಾರಿಸುವ ಮಾತು ಯಾರೂ ಆಡಬಾರದು. ದಾಖಲೆ ಸಮೇತ ಸಾಬೀತುಪಡಿಸಬೇಕು. ತೂಕದಲ್ಲಿ ಮೋಸ ಮಾಡುವ ಯಾವುದೇ ಕಾರ್ಖಾನೆ ಇದ್ದರೂ ಕ್ರಮ ಕೈಗೊಳ್ಳಲು ಸರ್ಕಾರ ಸ್ವತಂತ್ರವಾಗಿದೆ ಎಂದರು.

15 ವರ್ಷಗಳ ಹಿಂದೆಯೇ ಕ್ರಮ :
ರೈತರಿಗೆ ತೂಕದಲ್ಲಿ ಮೋಸವಾಗುತ್ತಿರುವ, ಹೊಸ ತಂತ್ರಜ್ಞಾನದ ಯಂತ್ರ ಅಳವಡಿಸುವ ಕುರಿತು ಕಾಂಗ್ರೆಸ್ ಸರ್ಕಾರ ಈಗ ಮಾತನಾಡುತ್ತಿದೆ. ಆದರೆ, ನಮ್ಮ ಕಾರ್ಖಾನೆಯಲ್ಲಿ 15 ವರ್ಷಗಳಿಂದ ನಿರಂತರವಾಗಿ ಹೊಸ ತಂತ್ರಜ್ಞಾನದ, ಎಲೆಕ್ಟಿçಕಲ್ ವೇಬ್ರಿಜ್ ಅಳವಡಿಸಲಾಗಿದೆ. ಎಲ್ಲಾ ಕಾರ್ಖಾನೆಗಳಲ್ಲೂ ಮೂರು ಪಾಳೆಯಲ್ಲಿ ಸಿಬ್ಬಂದಿ ಬದಲಾಗುತ್ತದೆ. ಇಲ್ಲಿ ತೂಕದ ಮಾಡಿದ ಬಳಿಕ, ಕಾರ್ಖಾನೆ ಮಾಲಿಕರು, ವ್ಯವಸ್ಥಾಪಕರು, ಆ ವಾಹನದ ಚಾಲಕರು ಹಾಗೂ ರೈತರಿಗೆ ನೇರವಾಗಿ ಬಿಲ್‌ಗಳು ಮೊಬೆÊಲ್‌ಗೆ ಹೋಗುತ್ತವೆ. ತೂಕದಲ್ಲಿ ಮೋಸ ಮಾಡಲು ಸಾಧ್ಯವೇ ಇಲ್ಲ. ಇಂತಹ ತಂತ್ರಜ್ಞಾನ ನಮ್ಮಲ್ಲಿ 15 ವರ್ಷಗಳಿಂದ ನಡೆದಿದೆ ಎಂದು ಹೇಳಿದರು.

ರಾಜ್ಯ ಸರ್ಕಾರ, ಸಕ್ಕರೆ ಕಾರ್ಖಾನೆಗಳಲ್ಲಿ ಯಂತ್ರ ಅಳವಡಿಸುವ ಅಥವಾ ಯಾವುದೇ ಹೊಸ ಕಾರ್ಯಕ್ಕೆ ಮುಂದಾದರೂ ನಾವು ಬೆಂಬಲಿಸಿ, ಸಹಕಾರ ಕೊಡುತ್ತೇವೆ. ಈ ವಿಷಯದಲ್ಲಿ ಸಲಹೆ ಬೇಕಾದರೂ ಕೊಡಲು ಸಿದ್ಧ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next