Advertisement

ಚಿಂತಾಮಣಿಯ ಕೈವಾರದ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಭಯ

10:09 PM Jun 12, 2021 | Team Udayavani |

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೈವಾರದ ಬೆಟ್ಟದಲ್ಲಿ ಶನಿವಾರ ಸಂಜೆ ಚಿರತೆ ಪ್ರತ್ಯಕ್ಷಗೊಂಡ ಹಿನ್ನೆಲೆಯಲ್ಲಿ ಜನರು ಭಯಭೀತರಾಗಿದ್ದಾರೆ.

Advertisement

ಕೈವಾರದ ಬೆಟ್ಟದಲ್ಲಿ ಸಂಜೆ ಚಿರತೆ ಪ್ರತ್ಯಕ್ಷವಾಗಿತ್ತು. ಅಲ್ಲದೇ, ಪದೇ ಪದೇ ಚಿಂತಾಮಣಿ ತಾಲೂಕಿನ ಕೈವಾರದ ಬೆಟ್ಟದಲ್ಲಿ ಚಿರತೆಗಳು  ಕಾಣಿಸಿಕೊಳ್ಳುತ್ತಿರುವುದು ಜನರನ್ನು ಮತ್ತಷ್ಟು ಆತಂಕಕ್ಕೆ ಕಾರಣವಾಗಿತ್ತು.

ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯನ್ನು ಹಿಡಿದು ಜನರ ಭಯವನ್ನು ದೂರಗೊಳಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದರು.

ಕೈವಾರದ ಬೆಟ್ಟದಲ್ಲಿ ಕಾಣಿಸಿಕೊಂಡಿರುವ ಚಿರತೆಯ ಚಲನವಲನಗಳ ಕುರಿತು ಸೆರೆಹಿಡಿದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಗಳನ್ನು ಹಿಡಿಯೋದ್ರಲ್ಲಿ ಯಶಸ್ವಿಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.

Advertisement

Udayavani is now on Telegram. Click here to join our channel and stay updated with the latest news.

Next