Advertisement

ಕೋವಿಡ್ : ರಾಸಾಯನಿಕ ದ್ರಾವಣ ಸಿಂಪಡಣೆಗೆ ಗೃಹ ಸಚಿವ ಬೊಮ್ಮಾಯಿ ಚಾಲನೆ

05:20 PM May 03, 2021 | Team Udayavani |

ಬೆಂಗಳೂರು:  ಕೋವಿಡ್ ಎರಡನೇ ಅಲೆಯ ನಿಯಂತ್ರಣಕ್ಕೆ ರಾಜ್ಯಾದ್ಯಂತ ಕೋವಿಡ್ ಹೆಚ್ಚಳ ಇರುವ ಪ್ರದೇಶಗಳಲ್ಲಿ ರಾಸಾಯನಿಕ ದ್ರಾವಣವನ್ನು ಸಿಂಪಡಿಸುವ ಕಾರ್ಯಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಿದರು.

Advertisement

ಬೆಂಗಳೂರಿನ ಟೌನ್ ಹಾಲ್ ಬಳಿ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ  ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ರಾಸಾಯನಿಕ ದ್ರಾವಣವನ್ನು ಸಿಂಪಡಿಸುವ ವಾಹನಗಳಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಸಚಿವ ಬೊಮ್ಮಾಯಿ ಅವರು ಚಾಲನೆ ನೀಡಿದರು.

ಓದಿ : ಆರ್.ಆರ್.ನಗರದ 200 ಸೋಂಕಿತರಿರುವ ಆಸ್ಪತ್ರೆಯಲ್ಲೂ ಆಕ್ಸಿಜನ್ ಸಮಸ್ಯೆ: ಡಿ.ಕೆ.ಸುರೇಶ್

ಕಳೆದ ಬಾರಿ ಕೋವಿಡ್  ಸೋಂಕು ಹೆಚ್ಚಳವಾದ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ವತಿಯಿಂದ ಸೋಂಕು ಹೆಚ್ಚು ಜನರಿಗೆ ತಗುಲಿದ ಪ್ರದೇಶದಲ್ಲಿ ಕೋವಿಡ್ ನಿಯಂತ್ರಣ ರಾಸಾಯನಿಕ ದ್ರಾವಣವನ್ನು ಸಿಂಪಡಿಸಲಾಗಿತ್ತು.  ಈಗ ಎರಡನೆಯ ಅಲೆ ನಿಯಂತ್ರಿಸುವ ಸಂಬಂಧ ಇಲಾಖೆ ಇಂದಿನಿಂದ ರಾಜ್ಯಾದ್ಯಂತ ರಾಸಾಯನಿಕ ದ್ರಾವಣ ಸಿಂಪಡಿಸುವ ಕೆಲಸ ಆರಂಭಿಸಿದೆ. ಈ ಸೋಂಕನ್ನು  ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ವಿವಿಧ ಮಾದರಿಯ 12 ಬೃಹತ್ ವಾಹನಗಳ ಮೂಲಕ ರಾಸಾಯನಿಕ ಸಿಂಪಡಣೆ ಕಾರ್ಯಾಚರಣೆ ಆರಂಭವಾಗಲಿದೆ. ಸಣ್ಣ ರಸ್ತೆಗಳಿರುವ ಪ್ರದೇಶಗಳಲ್ಲಿ ಸಣ್ಣ ವಾಹನಗಳನ್ನು ದ್ರಾವಣ ಸಿಂಪಡಿಸಲು ಬಳಕೆ ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಪೊಲೀಸ್ ಮಹಾನಿರ್ದೇಶಕರಾದ ಅಮರ ಕುಮಾರ ಪಾಂಡೆ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement

ಓದಿ : ಎಸ್ ಬಿ ಐ ಗ್ರಾಹಕರು ಈ ಕೆಲಸಕ್ಕಾಗಿ ಬ್ಯಾಂಕ್ ಗೆ ಹೋಗಬೇಕೆಂದಿಲ್ಲ..! ಮಾಹಿತಿ ಇಲ್ಲಿದೆ.

Advertisement

Udayavani is now on Telegram. Click here to join our channel and stay updated with the latest news.

Next