Advertisement

Chennai; ಆರ್ಮ್‌ಸ್ಟ್ರಾಂಗ್ ಹತ್ಯೆ ಆರೋಪಿ ಪೊಲೀಸ್ ಎನ್ ಕೌಂಟರ್ ನಲ್ಲಿ ಬಲಿ

10:02 AM Jul 14, 2024 | Team Udayavani |

ಚೆನ್ನೈ: ಬಹುಜನ ಸಮಾಜ ಪಕ್ಷದ (BSP) ತಮಿಳುನಾಡು ಮುಖ್ಯಸ್ಥ ಕೆ ಆರ್ಮ್‌ಸ್ಟ್ರಾಂಗ್ (K Armstrong) ಹತ್ಯೆಯ ಆರೋಪಿಗಳಲ್ಲಿ ಒಬ್ಬನನ್ನು ಶನಿವಾರ ರಾತ್ರಿ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಬಿಎಸ್‌ಪಿ ರಾಜ್ಯ ಮುಖ್ಯಸ್ಥರ ಹತ್ಯೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಇತಿಹಾಸ ಶೀಟರ್ ತಿರುವೆಂಗಡಂ ಎಂಬಾತನನ್ನು ಚೆನ್ನೈನ ಮಾಧವರಂ ಬಳಿ ಪೊಲೀಸ್ ಎನ್‌ಕೌಂಟರ್‌ ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಿರುವೆಂಗಡಂ ಕೊಲೆಗೂ ಮುನ್ನ, ಬಿಎಸ್‌ಪಿ ನಾಯಕನ ಚಟುವಟಿಕೆಗಳ ಮೇಲೆ ನಿರಂತರ ನಿಗಾ ಇರಿಸಿಕೊಂಡು ಹಲವು ದಿನಗಳ ಕಾಲ ಆರ್ಮ್‌ಸ್ಟ್ರಾಂಗ್‌ ನನ್ನು ಹಿಂಬಾಲಿಸುತ್ತಿದ್ದ ಎನ್ನಲಾಗಿದೆ.

ಕೆ ಆರ್ಮ್‌ಸ್ಟ್ರಾಂಗ್ ಅವರನ್ನು ಜುಲೈ 5 ರಂದು ಚೆನ್ನೈನ ಪೆರಂಬೂರ್ ಪ್ರದೇಶದಲ್ಲಿನ ಅವರ ನಿವಾಸದ ಬಳಿ ಆರು ಅಪರಿಚಿತ ವ್ಯಕ್ತಿಗಳು ಕೊಂದು ಹಾಕಿದ್ದರು. ಬೈಕ್‌ ನಲ್ಲಿ ಬಂದ ವ್ಯಕ್ತಿಗಳ ಗುಂಪು ಆರ್ಮ್‌ಸ್ಟ್ರಾಂಗ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿತು. ಅವರನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಕನಿಷ್ಠ 11 ಶಂಕಿತರನ್ನು ಬಂಧಿಸಲಾಗಿದೆ.

Advertisement

ಈ ಘಟನೆಯು ರಾಜ್ಯದಲ್ಲಿ ದೊಡ್ಡ ರಾಜಕೀಯ ಆಕ್ರೋಶವನ್ನು ಉಂಟುಮಾಡಿತು. ವಿರೋಧ ಪಕ್ಷಗಳು ಎಂಕೆ ಸ್ಟಾಲಿನ್ ನೇತೃತ್ವದ ತಮಿಳುನಾಡು ಸರ್ಕಾರವನ್ನು ಗುರಿಯಾಗಿಸಿಕೊಂಡು, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ವೈಫಲ್ಯವನ್ನು ಆರೋಪಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next