Advertisement

ಚೆನ್ನೈ ಶಾಲೆಗಳಿಗೆ ಇಂದು ರಜೆ; ಎಡೆಬಿಡದ ಮಳೆಗೆ ತ.ನಾಡಿನ ಹಲವು ಪ್ರದೇಶ ಜಲಾವೃತ

12:57 AM Nov 29, 2021 | Team Udayavani |

ಚೆನ್ನೈ: ಕಳೆದ ಕೆಲವು ದಿನಗಳಿಂದ ಚೆನ್ನೈಯಲ್ಲಿ ಸುರಿಯುತ್ತಿರುವ ಮಳೆ ರವಿವಾರವೂ ಮುಂದುವರಿದಿದ್ದು, ನಗರದ ಹಲವಾರು ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಉಪನಗರ ಪ್ರಾಂತ್ಯಗಳು ಭಾಗಶಃ ಮುಳುಗಡೆಯಾಗಿವೆ.

Advertisement

ಹಲವಾರು ರಸ್ತೆಗಳು, ಅಂಡರ್‌ಪಾಸ್‌ಗಳು ನೀರಿನಲ್ಲಿ ಮುಳುಗಿರುವುದರಿಂದ ಅನೇ ಕ ಕಡೆ ರಸ್ತೆ ಸಂಚಾರ ಸಂಪೂರ್ಣ ಬಂದ್‌ ಆಗಿದೆ. ಮಳೆ ನಿರಂತರವಾಗಿ ಸುರಿಯುತ್ತಿ ರುವ ಹಿನ್ನೆಲೆಯಲ್ಲಿ ಸೋಮವಾರವೂ ಎಲ್ಲ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪುದುಚೇರಿ, ಕಾರೈಕಲ್‌ನಲ್ಲಿ ಶಾಲಾ- ಕಾಲೇಜುಗಳಿಗೆ ಎರಡು ದಿನಗಳ ರಜೆ ಘೋಷಿಸಲಾಗಿದೆ.

ಚೆನ್ನೈಯ ಸತ್ಯಾ ಗಾರ್ಡನ್‌, ಕುಲು ವಂಚೇರಿ, ಇಯ್ನಾಪಂಥಂಗಲ್‌ ಸೇರಿದಂತೆ ಹಲವಾರು ಜನವಸತಿ ಪ್ರದೇಶಗಳಲ್ಲಿ ಮೊಣಕಾಲೆತ್ತರ ನೀರು ನಿಂತಿವೆ. ಜನರು ಅದೇ ನೀರಿನಲ್ಲಿ ತಮ್ಮ ಅಗತ್ಯ ವಸ್ತುಗಳನ್ನು ತರಲು ಓಡಾಡುವಂತಾಗಿದೆ.

ಇದನ್ನೂ ಓದಿ:ಚೀನಾದಲ್ಲಿ ದಿನಕ್ಕೆ 6.30 ಲಕ್ಷ ಕೇಸ್‌: ತಜ್ಞರ ಎಚ್ಚರಿಕೆ

ಈ ಪ್ರಾಂತ್ಯಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ವಿದ್ಯುತ್‌ ನಿಲುಗಡೆ ಮಾಡಲಾಗಿದ್ದು, ರಾತ್ರಿ ವೇಳೆಯೂ ಆ ನೀರಿನಲ್ಲಿ ತಮ್ಮ ಮೊಬೈಲ್‌ಗ‌ಳಲ್ಲಿನ ಟಾರ್ಚ್‌ ಬೆಳಕಿನಲ್ಲಿ ಜನರು ಸಂಚರಿಸು ವಂತಾಗಿದೆ. ರವಿವಾರ ಸಿಎಂ ಎಂ.ಕೆ. ಸ್ಟಾಲಿನ್‌ ಅವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪರಿಹಾರ ಸಾಮಗ್ರಿಗಳನ್ನೂ ವಿತರಿಸಿದ್ದಾರೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next