Advertisement

BY-Election: ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್‌ ಕೊಡಿಸಲು ಚದುರಂಗದಾಟ: ಡಿ.ಕೆ. ಸುರೇಶ್‌

12:51 AM Oct 26, 2024 | Team Udayavani |

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನಿಖಿಲ್‌ಗೆ ಟಿಕೆಟ್‌ ಸಿಗುವಂತೆ ಮಾಡಲು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ಚದುರಂಗದಾಟ ಸೃಷ್ಟಿಸಿದರು ಎಂದು ಮಾಜಿ ಸಂಸದ ಡಿ.ಕೆ. ಸುರೇಶ್‌ ಅವರು ತಿಳಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಿರಿಯ ರಾಜಕಾರಣಿಯಾದ ಕುಮಾರಸ್ವಾಮಿ ಅವರು ಕಳೆದ 40 ವರ್ಷಗಳಿಂದ ಅವರ ದೃಷ್ಟಿಕೋನದಲ್ಲಿ ತಂತ್ರಗಾರಿಕೆ ಮಾಡಿಕೊಂಡು ಬಂದಿದ್ದಾರೆ. ಇದರ ಮುಂದುವರೆದ ಭಾಗವಿದು.

ನಿಖಿಲ್‌ ಕುಮಾರಸ್ವಾಮಿ ಅವರೇ ಚನ್ನಪಟ್ಟಣ ಉಪಚುನಾವಣೆಯಲ್ಲಿ ಅಭ್ಯರ್ಥಿಯಾಗುತ್ತಾರೆ ಎನ್ನುವ ಸತ್ಯ ಎಲ್ಲರಿಗೂ ತಿಳಿದಿತ್ತು. ಜೆಡಿಎಸ್‌ ಪಕ್ಷಕ್ಕೆ ಕುಮಾರಸ್ವಾಮಿ ಅವರೇ ಅಧಿನಾಯಕರು. ಎಲ್ಲವೂ ಅವರೇ ತೀರ್ಮಾನ ತೆಗೆದುಕೊಳ್ಳುತ್ತಾರೆ. ಬಲವಂತವಾಗಿ ಚುನಾವಣೆಗೆ ನಿಖಿಲ್‌ ಅವರನ್ನು ನಿಲ್ಲಿಸಲಾಗುತ್ತಿದೆ ಎನ್ನುವುದೆಲ್ಲ ಸುಳ್ಳು, ಅವರ ಉದ್ದೇಶ ಈ ಮೂಲಕ ಫ‌ಲ ನೀಡಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next