Advertisement

ಸಿವಿಲ್‌ ನ್ಯಾಯಾಧೀಶರ ಹುದ್ದೆಗೆ ಧರ್ಮಸ್ಥಳದ ಚೇತನಾ ಆಯ್ಕೆ

10:04 PM Feb 26, 2021 | Team Udayavani |

ಬೆಳ್ತಂಗಡಿ: ಕರ್ನಾಟಕ ಉಚ್ಚ ನ್ಯಾಯಾ ಲಯದ 2020ನೇ ಸಿವಿಲ್‌ ಜಡ್ಜ್ ನ್ಯಾಯಾಧೀಶರ ಪರೀಕ್ಷೆ ಯಲ್ಲಿ ಉತ್ತೀರ್ಣರಾಗಿ 2021 ಫೆ.25ರಂದು ಹೊರ ಡಿಸಲಾದ ಅಧಿ ಸೂಚನೆಯಂತೆ ಸಿವಿಲ್‌ ನ್ಯಾಯಾಧೀಶರ ಹುದ್ದೆಗೆ ಧರ್ಮಸ್ಥಳದ ಚೇತನಾ ಅವರು ಆಯ್ಕೆಯಾಗಿದ್ದಾರೆ.

Advertisement

ಇವರು ಧರ್ಮಸ್ಥಳದ ನಾರ್ಯದ ರಾಮಣ್ಣ ಪೂಜಾರಿ ಮತ್ತು ಸೀತಾ ದಂಪತಿ ಪುತ್ರಿ.

ಕನ್ನಡ ಮಾಧ್ಯಮ ಶಿಕ್ಷಣ :

ಉಪ್ಪಿನಂಗಡಿ ಸಮೀಪದ ಪೆರ್ನೆ ಕನ್ನಡ ಮಾಧ್ಯಮ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಕನ್ಯಾಡಿ ಸರಕಾರಿ ಶಾಲೆಯಲ್ಲಿ ಏಳನೇ ತರಗತಿ ಪೂರ್ಣಗೊಳಿಸಿ, ಧರ್ಮಸ್ಥಳ ಶ್ರೀ ಧರ್ಮಸ್ಥಳ ಮಂಜುನಾಥ ಸೆಕೆಂಡರಿ ಶಾಲೆಯಲ್ಲಿ ಪ್ರೌಢ ಶಿಕ್ಷಣ, ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣ ಪೂರ್ಣಗೊಳಿಸಿದ್ದಾರೆ.

ಬಳಿಕ ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನಲ್ಲಿ 2016ರಲ್ಲಿ ತಮ್ಮ ಕಾನೂನು ಪದವಿಯ ವಿದ್ಯಾಭ್ಯಾಸ ಪೂರ್ಣಗೊಳಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next