Advertisement

IED ಗೆ 11 ಯೋಧರು ಹುತಾತ್ಮ: ದಾಂತೇವಾಡದಲ್ಲಿ ನಕ್ಸಲರ ಅಟ್ಟಹಾಸ

03:26 PM Apr 26, 2023 | Team Udayavani |

ರಾಯಪುರ : ದಾಂತೇವಾಡದಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದು ನೆಲದಲ್ಲಿ ಹುಡುಗಿಸಿಟ್ಟಿದ್ದ ಐಇಡಿ ಸ್ಪೋಟಗೊಂಡು ಹನ್ನೊಂದು ಮಂದಿ ಯೋಧರು ಹುತಾತ್ಮರಾಗಿದ್ದಾರೆ.

Advertisement

ಛತ್ತೀಸ್‌ಗಢದ ನಕ್ಸಲ್ ಪ್ರಾಬಲ್ಯ ಇರುವ ದಾಂತೇವಾಡದ ಅರನ್‌ಪುರದಲ್ಲಿ ಈ ದಾಳಿ ನಡೆದಿದ್ದು, ಕಾರ್ಯಾಚರಣೆ ನಿರತರಾಗಿದ್ದ ಭದ್ರತಾಪಡೆಗಳನ್ನು ಗುರಿಯಾಗಿರಿಸಿಕೊಂಡು ನಕ್ಸಲರು ಹೊಂಚು ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ.

ದಾಂತೇವಾಡದಲ್ಲಿ ಭದ್ರತಾ ಸಿಬಂದಿಗಳ ಮೇಲೆ ನಕ್ಸಲರು ಐಇಡಿ ದಾಳಿ ನಡೆಸಿ 11 ಸಿಬ್ಬಂದಿಯನ್ನು ಬಲಿತೆಗೆದುಕೊಂಡ ಮಾಹಿತಿ ನಮ್ಮ ಬಳಿ ಇದೆ. ಇದು ತುಂಬಾ ದುಃಖಕರವಾಗಿದೆ. ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪ. ದಾಳಿ ನಡೆಸಿದ ನಕ್ಸಲರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಛತ್ತೀಸ್‌ಗಢ ಸಿಎಂ ಭೂಪೇಶ್ ಬಘೇಲ್ ಹೇಳಿಕೆ ನೀಡಿದ್ದಾರೆ.

ಹೆಚ್ಚುವರಿ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next