Advertisement

ನಕ್ಸಲರಿಂದ ಸ್ಫೋಟ : ಐಟಿಬಿಪಿ ಅಧಿಕಾರಿ ಬಲಿ; ಇಬ್ಬರಿಗೆ ಗಾಯ

04:15 PM Mar 14, 2022 | Team Udayavani |

ನಾರಾಯಣಪುರ: ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಸೋಮವಾರ ನಕ್ಸಲರು ನಡೆಸಿದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟದ ಎರಡು ಪ್ರತ್ಯೇಕ ಘಟನೆಗಳಲ್ಲಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದು ಮತ್ತು ಇಬ್ಬರು ಕಾನ್ಸ್ಟೇಬಲ್ ಗಳು ಗಾಯಗೊಂಡಿದ್ದಾರೆ.

Advertisement

ಐಟಿಬಿಪಿಯ 53ನೇ ಬೆಟಾಲಿಯನ್‌ನ ತಂಡ ರಸ್ತೆ ನಿರ್ಮಾಣ ಕಾಮಗಾರಿಗೆ ಭದ್ರತೆ ನೀಡುವ ಸಲುವಾಗಿ ಗಸ್ತು ಕರ್ತವ್ಯಕ್ಕೆ ತೆರಳುತ್ತಿದ್ದಾಗ ದೊಂಡ್ರಿಬೀಡ ಮತ್ತು ಸೋನ್‌ಪುರ ಗ್ರಾಮಗಳ ನಡುವೆ ಬೆಳಗ್ಗೆ 8.30ರ ಸುಮಾರಿಗೆ ಘಟನೆ ನಡೆದಿದೆ ಎಂದು ಪೊಲೀಸ್ ಮಹಾನಿರೀಕ್ಷಕ ಸುಂದರರಾಜ್ ಪಿ ಪಿಟಿಐಗೆ ತಿಳಿಸಿದ್ದಾರೆ.

ಗಸ್ತು ತಂಡವು ಅರಣ್ಯ ಪ್ರದೇಶವನ್ನು ಸುತ್ತುವರೆದಿರುವಾಗ, ಭದ್ರತಾ ಸಿಬ್ಬಂದಿ ಒತ್ತಡದ ಐಇಡಿ ಸಂಪರ್ಕಕ್ಕೆ ಬಂದ ಕಾರಣ ಸ್ಫೋಟ ನಡೆದಿದೆ ಎನ್ನಲಾಗಿದೆ.

ಉತ್ತರಾಖಂಡದ ತೆಹ್ರಿ ಮೂಲದ ಸಹಾಯಕ ಸಬ್ ಇನ್ಸ್‌ಪೆಕ್ಟರ್ ರಾಜೇಂದ್ರ ಸಿಂಗ್ ಸ್ಫೋಟದಲ್ಲಿ ಮೃತಪಟ್ಟಿದ್ದು,, ಹೆಡ್ ಕಾನ್‌ಸ್ಟೆಬಲ್  ಗಳು  ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next