Advertisement

ಚೋಟಾ ರಾಜನ್ ಸಹಚರ,ಮೋಸ್ಟ್‌ ವಾಂಟೆಡ್‌ ವಿನೇಶ್‌ ಶೆಟ್ಟಿ ಅರೆಸ್ಟ್‌ 

08:50 AM Aug 06, 2017 | Team Udayavani |

ಉಳ್ಳಾಲ: ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿ  ಜಾಮೀನಿನ ಮೇಲೆ ಬಿಡುಗಡೆಗೊಂಡು  ವಿಚಾರಣೆಗೆ ಹಾಜರಾಗದೆ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ  ಕುಖ್ಯಾತ ಆರೋಪಿ, ಚೋಟಾ ರಾಜನ್ ಸಹಚರ ವಿನೇಶ್ ಶೆಟ್ಟಿ (44) ಯನ್ನು ಕೊಣಾಜೆ ಪೊಲೀಸರು ಮುಂಬಯಿಯಲ್ಲಿ ಬಂಧಿಸಿದ್ದಾರೆ. 

Advertisement

ಉಡುಪಿ ಯ ಶಿರ್ವ ನಿವಾಸಿಯಾಗಿದ್ದ  ವಿನೇಶ್ ಶೆಟ್ಟಿ 2003  ರಲ್ಲಿ ಕಪ್ಪು ಕಲ್ಲು ಕೋರೆ ಮಾಲೀಕ ವೇಣುಗೋಪಾಲ  ನಾಯಕ್ ಮತ್ತು ಅವರ ಚಾಲಕ ಸಂತೋಷ್ ಎಂಬವರನ್ನು ಮುಡಿಪು ಇರಾ ಕ್ರಾಸ್ ಸಮೀಪ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆ ಸೇರಿದಂತೆ 6 ಮಂದಿ ಆರೋಪಿಗಳನ್ನು ಬಂಧಿಸಲಾಗಿತ್ತು. ಇದರಲ್ಲಿ ಜಾಮೀನು  ಪಡೆದಿದ್ದ ಆರೋಪಿ ವಿನೇಶ್‌ 2015 ರವರೆಗೂ ವಿಚಾರಣೆಗೆ ಹಾಜರಾಗುತ್ತಿದ್ದ. ಬಳಿಕ ತಲೆಮರೆಸಿಕೊಂಡಿದ್ದ ವಿನೇಶ್ ವಿರುದ್ದ ವಾರಂಟ್ ಜಾರಿ ಮಾಡಲಾಗಿತ್ತು. 

ವಿನೇಶ್  ವಿರುದ್ಧ ಮುಂಬೈ, ದಾವಣೆಗೆರೆ, ಪುಣೆ, ಹೈದರಬಾದ್, ಮಂಗಳೂರಿನಲ್ಲಿ ಕೊಲೆ, ಅಕ್ರಮ ಶಸ್ತ್ರಾಸ್ತ್ರ , ಕೊಲೆ, ಕೊಲೆಯತ್ನ ಸಹಿತ ಹಲವು ಪ್ರಕರಣಗಳು ದಾಖಲಾಗಿವೆ. ನಟೋರಿಯಸ್ ಕ್ರಿಮಿನಲ್ ಆಗಿದ್ದ ವಿನೇಶ್ ಮುಂಬೈನಲ್ಲಿ ಛೋಟಾ ಶಕೀಲ್ ಸಹಚರನಾಗಿ ಕಾರ್ಯನಿರ್ವಹಿಸುತ್ತಿದ್ದ. 

ಕೊಣಾಜೆ ಠಾಣೆಯ ಇನ್ಸ್ ಪೆಕ್ಟರ್ ಅಶೋಕ್ ಮತ್ತು ಎಸ್. ಐ ಸುಕುಮಾರ್  ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ.                        

ಮುಂಬೈನಲ್ಲಿ ನಾಲ್ಕು ಕೊಲೆ ಪ್ರಕರಣ, ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಪ್ರಕರಣ,  ಮಂಗಳೂರಿನಲ್ಲಿ ಎರಡು ಕೊಲೆ, ದಾವಣಗೆರೆ ಡಕಾಯಿತಿ ಪ್ರಕರಣ, ಪುಣೆಯ ಅಹಮದ್ ನಗರದಲ್ಲಿ 3 ಕೋಟಿ ಹವಾಲಾ ಹಣ ಲೂಟಿ ಗೈದ ಪ್ರಕರಣದಲ್ಲಿ ಈತ ಪ್ರಮುಖ ಆರೋಪಿಯಾಗಿದ್ದ. 

Advertisement

ಛೋಟಾ ರಾಜನ್ ಸಹಚರನಾಗಿದ್ದ ಈತ  ಬಳಿಕ ಹೇಮಂತ್ ಪೂಜಾರಿ ಜತೆಗೆ ಕುಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದ.

Advertisement

Udayavani is now on Telegram. Click here to join our channel and stay updated with the latest news.

Next