Advertisement

ಏಕಕಾಲದಲ್ಲಿ ಚುನಾವಣೆ ಸಾಧ್ಯವೇ ಇಲ್ಲ: ಸಿಇಸಿ

08:15 AM Aug 24, 2018 | Team Udayavani |

ಔರಂಗಾಬಾದ್‌: ಲೋಕಸಭೆ ಮತ್ತು ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲಾಗುತ್ತದೆ ಎಂಬ ವದಂತಿಗಳ ನಡುವೆಯೇ ‘ಅದು ಸಾಧ್ಯವೇ ಇಲ್ಲ’ ಎಂದು ಪುನರುಚ್ಚರಿಸಿದ್ದಾರೆ ಮುಖ್ಯ ಚುನಾವಣಾ ಆಯುಕ್ತ ಓಂ ಪ್ರಕಾಶ್‌ ರಾವತ್‌. ಅದು ಸಾಧ್ಯವಾಗಬೇಕೆಂದರೆ ಕಾನೂನಿನಲ್ಲಿ ಬದಲಾವಣೆ ಆಗಬೇಕಾಗುತ್ತದೆ ಎಂದು ಪ್ರತಿಪಾದಿಸಿದ್ದಾರೆ. ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ಗುರುವಾರ ಮಾತನಾಡಿದ ಅವರು, ಚುನಾವಣಾ ಆಯೋಗ ನಿಗದಿತ ಲೋಕಸಭೆಯ ಅವಧಿಗಿಂತ 14 ತಿಂಗಳು ಮೊದಲೇ ಸಾಮಾನ್ಯವಾಗಿ ಸಿದ್ಧತೆ ಆರಂಭಿಸುತ್ತಿದೆ ಎಂದಿದ್ದಾರೆ.

Advertisement

ಡಿ.15ಕ್ಕೆ ಮಿಜೋರಾಂ, ಜ.5, ಜ.7 ಮತ್ತು ಜ.20ಕ್ಕೆ ಕ್ರಮವಾಗಿ ಛತ್ತೀಸ್‌ಗಡ, ಮಧ್ಯಪ್ರದೇಶ ಮತ್ತು ರಾಜಸ್ಥಾನ ವಿಧಾನಸಭೆಗಳ ಅವಧಿ ಮುಕ್ತಾಯಗೊಳ್ಳಲಿದೆ. ಹೀಗಾಗಿ ಎಪ್ರಿಲ್‌-ಮೇನಲ್ಲಿಯೇ ಈ ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಸುವ ಸಾಧ್ಯತೆಗಳೂ ಇವೆ. ಇತ್ತೀಚೆಗಷ್ಟೇ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಕಾನೂನು ಆಯೋಗಕ್ಕೆ ಪತ್ರ ಬರೆದು ಏಕಕಾಲದಲ್ಲಿ ಚುನಾವಣೆ ನಡೆಸುವುದು ಕಲ್ಪನೆ ಅಲ್ಲ. ಅದನ್ನು ಪ್ರಾಯೋಗಿಕವಾಗಿ ಅನುಷ್ಠಾನ ಮಾಡಬಹುದು ಎಂದಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next