Advertisement

ಬಿಲ್ಕಿಸ್‌ ಬಾನೋ ಪ್ರಕರಣ: ವಕೀಲರಿಗೆ ಸುಪ್ರೀಂಕೋರ್ಟ್‌ ತರಾಟೆ

08:10 PM Dec 14, 2022 | Team Udayavani |

ನವದೆಹಲಿ: ಬಿಲ್ಕಿಸ್‌ ಬಾನೋ ಪ್ರಕರಣವನ್ನು ಕ್ಷಿಪ್ರವಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು ಎಂದು ಸಲ್ಲಿಕೆಯಾಗಿರುವ ಅರ್ಜಿಗಳನ್ನು ಪರಿಗಣಿಸಲು ಸುಪ್ರೀಂಕೋರ್ಟ್‌ ನಿರಾಕರಿಸಿದೆ.

Advertisement

ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಅವರನ್ನು ಒಳಗೊಂಡ ನ್ಯಾಯಪೀಠ ನ್ಯಾಯವಾದಿ ಶೋಭಾ ಗುಪ್ತಾ ಸಲ್ಲಿಸಿದ ಅರ್ಜಿಯ ವಿಚಾರಣೆ ವೇಳೆ “ನಿಮ್ಮ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲಾಗುತ್ತದೆ.

ಪದೇ ಪದೆ ಅದನ್ನು ಪ್ರಸ್ತಾಪ ಮಾಡಿ ನಮಗೆ ಕಿರಿ ಕಿರಿ ಉಂಟು ಮಾಡಬೇಡಿ’ ಎಂದು ಖಡಕ್‌ ಆಗಿ ಹೇಳಿತು.

ಮಂಗಳವಾರ ನಡೆದಿದ್ದ ಬೆಳವಣಿಗೆಯಲ್ಲಿ ನ್ಯಾ.ಬೇಲಾ ಎಂ.ತ್ರಿವೇದಿ ವಿಚಾರಣೆಯಿಂದ ಹಿಂದೆ ಸರಿದಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next