Advertisement

ಮುಖ್ಯನ್ಯಾಯಮೂರ್ತಿ ಪ್ರಮಾಣ ವಚನ ಇಂದು

01:13 PM Feb 12, 2018 | Team Udayavani |

ಬೆಂಗಳೂರು: ರಾಜ್ಯ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ದಿನೇಶ್‌ ಮಹೇಶ್ವರಿ ಅವರು ಸೋಮವಾರ ಅಧಿಕಾರ ಸ್ವೀಕರಿಸಲಿದ್ದಾರೆ. ಸಂಜೆ 4.30ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ನಡೆಯುವ ಸಮಾರಂಭದಲ್ಲಿ ರಾಜ್ಯಪಾಲ ವಜೂಭಾಯಿ ವಾಲಾ ಅವರು, ನೂತನ ಸಿಜೆ ದಿನೇಶ್‌ ಮಹೇಶ್ವರಿ ಅವರಿಗೆ ಪ್ರಮಾಣವಚನ ಬೋಧಿಸಲಿದ್ದಾರೆ.

Advertisement

ರಾಜಸ್ಥಾನದ ಉದಯ್‌ಪುರ ಮೂಲದ ನ್ಯಾಯಮೂರ್ತಿ ದಿನೇಶ್‌ ಮಹೇಶ್ವರಿ ಅವರು 2016 ಫೆ.24ರಿಂದ ಇಲ್ಲಿಯವರೆಗೂ ಮೇಘಾಲಯ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಇದಕ್ಕೂ ಮೊದಲು 2004ರ ಸೆ.2ರಿಂದ 2014ರವರೆಗೆ ರಾಜಸ್ಥಾನ ಹೈಕೋರ್ಟ್‌ ನ್ಯಾಯಮೂರ್ತಿಯಾಗಿ, ಬಳಿಕ ಜುಲೈ 19, 2014 ರಿಂದ 2016ರ ಫೆಬ್ರವರಿಯವರೆಗೆ ಅಹಮದಾಬಾದ್‌ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next