Advertisement

ನರೇಗಾ ಬಾಕಿ ಬಿಡುಗಡೆಗೆ ಮುಖ್ಯಮಂತ್ರಿ ಮನವಿ

07:08 AM Jun 03, 2019 | Lakshmi GovindaRaj |

ಬೆಂಗಳೂರು: ಕೇಂದ್ರ ಸರ್ಕಾರವು “ನರೇಗಾ’ ಅಡಿ ರಾಜ್ಯಕ್ಕೆ ಬಾಕಿ ಉಳಿಸಿಕೊಂಡಿರುವ ಸುಮಾರು 2000 ಕೋಟಿ ರೂ.ಗಳನ್ನು ತ್ವರಿತವಾಗಿ ಬಿಡುಗಡೆ ಮಾಡುವಂತೆ ರಾಜ್ಯದ ಕೇಂದ್ರ ಸಚಿವರು ಗಮನ ಹರಿಸಬೇಕೆಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

Advertisement

ಈ ಸಂಬಂಧ ಭಾನುವಾರ ಟ್ವೀಟ್‌ ಮಾಡಿರುವ ಅವರು, ರಾಜ್ಯದ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡುವುದಾಗಿ ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ, ಪ್ರಹ್ಲಾದ್‌ ಜೋಶಿ ಅವರು ನೀಡಿರುವ ಹೇಳಿಕೆಯನ್ನು ಸ್ವಾಗತಿಸುತ್ತೇನೆ.

ಹಾಗೆಯೇ ಕೇಂದ್ರ ಸರ್ಕಾರವು ನರೇಗಾ ಅಡಿ ಬಾಕಿ ಉಳಿಸಿಕೊಂಡಿರುವ 2,000 ಕೋಟಿ ರೂ.ಗಳನ್ನು ರಾಜ್ಯಕ್ಕೆ ಬಿಡುಗಡೆ ಮಾಡುವ ನಿಟ್ಟಿನಲ್ಲಿಯೂ ಕೇಂದ್ರ ಸಚಿವರು ಪ್ರಯತ್ನಿಸಬೇಕೆಂದು ಕೋರುತ್ತೇನೆ. ಇದಕ್ಕೆ ಸಂಬಂಧಪಟ್ಟ ವಿವರಗಳನ್ನು ಶೀಘ್ರವೇ ಒದಗಿಸಲಾಗುವುದು’ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next