Advertisement

ಲಾಕ್ ಡೌನ್ 4.0 ಕುರಿತು ಚರ್ಚಿಸಲು ನಾಳೆ ಮುಖ್ಯಮಂತ್ರಿ ಬಿ.ಎಸ್.ವೈ. ಮಹತ್ವದ ಸಭೆ

08:29 AM May 18, 2020 | Hari Prasad |

ಬೆಂಗಳೂರು: ಕೋವಿಡ್ ಸಂಬಂಧಿತ ದೇಶವ್ಯಾಪಿ ಲಾಕ್ ಡೌನ್ ಮೇ 31ರವರೆಗೆ ವಿಸ್ತರಣೆಗೊಂಡಿದೆ.

Advertisement

ಈ ಸಂಬಂಧವಾಗಿ ಇಂದು ಆದೇಶವನ್ನು ಪ್ರಕಟಿಸಿರುವ ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ತತ್ಸಂಬಂದಿ ಸೂಚನೆಗಳನ್ನೂ ರವಾನಿಸಿದೆ.

ಮತ್ತು ನಾಲ್ಕನೇ ಹಂತದ ಲಾಕ್ ಡೌನ್ ಸಂದರ್ಭದಲ್ಲಿ ಅನುಸರಿಸಬೇಕಾದ ನಿಯಮಗಳ ಮಾರ್ಗಸೂಚಿಗಳನ್ನೂ ಸಹ ಕೇಂದ್ರ ಈಗಾಗಲೇ ಪ್ರಕಟಿಸಿದೆ.

ಈ ಹಿನ್ನಲೆಯಲ್ಲಿ ಲಾಕ್ ಡೌನ್ 4.0 ರ ಕುರಿತು ರಾಜ್ಯದಲ್ಲಿ ಕೈಗೊಳ್ಳಬೇಕಾಗಿರುವ ಕ್ರಮಗಳ ಕುರಿತಾಗಿ ಚರ್ಚಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೇ 18 ರಂದು ಬೆಳಿಗ್ಗೆ 11 ಗಂಟೆಗೆ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಸಭೆಯೊಂದನ್ನು ಕರೆದಿದ್ದಾರೆ.

ಈ ಸಭೆಯಲ್ಲಿ ಮುಂದಿನ ಹಂತದ ಲಾಕ್ ಡೌನ್ ಅವಧಿಯಲ್ಲಿ ರಾಜ್ಯದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next