Advertisement

ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಜಿಲ್ಲಾಧ್ಯಕ್ಷರ ಜೊತೆ ಮುಖ್ಯಮಂತ್ರಿ ವಿಡಿಯೋ ಕಾನ್ಫೆರೆನ್ಸ್

08:10 AM May 11, 2020 | Hari Prasad |

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಕರ್ನಾಟಕ ಬಿಜೆಪಿಯ ರಾಜ್ಯಾಧ್ಯಕ್ಷರು ಹಾಗೂ ಜಿಲ್ಲಾಧ್ಯಕ್ಷರ ಜೊತೆ ವೀಡಿಯೋ ಕಾನ್ಫರೆನ್ಸ್ ಮಾತುಕತೆ ನಡೆಸಿದರು.

Advertisement

ಈ ವಿಡಿಯೋ ಕಾನ್ಫೆರೆನ್ಸ್ ಸಭೆಯಲ್ಲಿ ಭಾಗವಹಿಸಿದ್ದ ರಾಜ್ಯ ಬಿಜೆಪಿಯ ಪದಾಧಿಕಾರಿಗಳು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಘೋಷಣೆ ‌ಮಾಡಿರುವ ಆರ್ಥಿಕ ಪ್ಯಾಕೇಜ್ ಗಾಗಿ ಅವರನ್ನು  ಅಭಿನಂದಿಸಿದರು.

ಮತ್ತು ಈ ಆರ್ಥಿಕ ಪ್ಯಾಕೇಜ್ ನಲ್ಲಿ ಕೈ ಬಿಟ್ಟು ಹೋಗಿರುವ ಕೆಲವರ್ಗಗಳಿಗೂ ಶೀಘ್ರದಲ್ಲೇ ಪ್ಯಾಕೇಜ್ ಘೋಷಣೆ ಮಾಡುವಂತೆ ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಯವರನ್ನು ಒತ್ತಾಯಿಸಲಾಯಿತು.

ಮತ್ತು ಇವರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಯವರು, ಇನ್ನೆರಡು‌ ದಿನಗಳಲ್ಲಿ ಈ ಕುರಿತಾಗಿ ಒಂದು ಹೊಸ ಆರ್ಥಿಕ ಪ್ಯಾಕೇಜ್ ಘೋಷಣೆ ‌ಮಾಡಲಾಗುವುದು ಎಂದು ಭರವಸೆ ನೀಡಿದರು.

ರಾಜ್ಯ ಸರ್ಕಾರದ ಕಾರ್ಯಕ್ರಮಗಳು ಮನೆ ಮನೆಗೆ ಮುಟ್ಟುವಂತೆ‌ ಮಾಡುವ ಜವಬ್ದಾರಿ ನಿಮ್ಮ‌ ಮೇಲಿದೆ ಎಂದು ಮುಖ್ಯಮಂತ್ರಿ ಯಡಿಯೂಪ್ಪ ಇದೇ ಸಂದರ್ಭದಲ್ಲಿ ಪಕ್ಷದ ಪದಾಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟರು.

Advertisement

ಈ ವೀಡಿಯೋ ಕಾನ್ಫರೆನ್ಸ್ ನಲ್ಲಿ ವ್ಯಕ್ಯವಾದ ಅಭಿಪ್ರಾಯಗಳನ್ನು ಆದ್ಯತೆ ಮೇರೆಗೆ ಪರಿಗಣಿಸಲಾಗುವುದು ಎಂಬ ಮಾತನ್ನೂ ಮುಖ್ಯಮಂತ್ರಿಯವರು ಇದೇ ಸಂದರ್ಭದಲ್ಲಿ ಹೇಳಿದರು ಹಾಗೂ ಜಿಲ್ಲಾವಾರು ಕೋವಿಡ್ ನಿಯಂತ್ರಣದಲ್ಲಿ ಏನಾದರೂ ಸಮಸ್ಯೆಗಳುಂಟಾದರೆ ಕೂಡಲೇ ತನಗೆ ಕರೆ‌ ಮಾಡುವಂತೆ ಬಿ.ಎಸ್.ವೈ ಅವರು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next