Advertisement

ನಿರ್ಮಲಾನಂದ ಸ್ವಾಮೀಜಿಯವರನ್ನು ಭೇಟಿಯಾದ ಮುಖ್ಯಮಂತ್ರಿ ಯಡಿಯೂರಪ್ಪ

09:12 AM Aug 22, 2019 | Hari Prasad |

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ನಗರದ ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಪೀಠಾಧ್ಯಕ್ಷರಾದ ನಿರ್ಮಲಾನಂದ ಸ್ವಾಮೀಜಿ ಅವರಿಂದ  ಆಶೀರ್ವಾದ ಪಡೆದರು.

Advertisement

ಸ್ವಾಮೀಜಿಯವರು ಮಠದ ಪರವಾಗಿ ಮುಖ್ಯಮಂತ್ರಿಯವರಿಗೆ ಹಾರ, ಶಾಲು ಹಾಕಿ ಆಶೀರ್ವದಿಸಿದರು. ಪ್ರಸಕ್ತ ರಾಜಕೀಯ ಪರಿಸ್ಥಿತಿ ಮತ್ತು ರಾಜ್ಯದಲ್ಲಿನ ಪ್ರವಾಹ ಸ್ಥಿತಿಗತಿಗಳ ಕುರಿತಾಗಿ ಮುಖ್ಯಮಂತ್ರಿಯವರು ಸ್ವಾಮೀಜಿಯವರೊಂದಿಗೆ ಚರ್ಚಿಸಿದರು ಎಂದು ತಿಳಿದುಬಂದಿದೆ.

ಈ ಸಂದರ್ಭದಲ್ಲಿ ನೂತನ ಸಚಿವರಾದ ಆರ್. ಅಶೋಕ್, ವಿ.ಸೋಮಣ್ಣ, ಬಸವರಾಜ ಬೊಮ್ಮಾಯಿ, ಡಾ. ಸಿ.ಎನ್.ಅಶ್ವಥನಾರಾಯಣ ಮೊದಲಾದವರು ಮುಖ್ಯಮಂತ್ರಿಯವರ ಜೊತೆಗಿದ್ದರು.


Advertisement

Udayavani is now on Telegram. Click here to join our channel and stay updated with the latest news.

Next